ಶುಕ್ರವಾರ ಪ್ರಕಟಣೆ ನೀಡಿರುವ ನಗರಸಭೆ ಆಯುಕ್ತ ಎಂ.ರಾಜಣ್ಣ ಅವರು, ‘ಪಾದಚಾರಿ ಮಾರ್ಗಗಳ ಮೇಲೆವ್ಯಾಪಾರ ಮಾಡುವ ಮಾರಾಟಗಾರರು ಮೂರು ದಿನಗಳ ಒಳಗಾಗಿ ವ್ಯಾಪಾರ ತೆರವುಗೊಳಿಸಬೇಕು. ತಪ್ಪಿದಲ್ಲಿ ನಗರಸಭೆ ಮತ್ತು ಪೊಲೀಸ್ ಇಲಾಖೆ ವತಿಯಿಂದ ತೆರವುಗೊಳಿಸಿ, ಸಾಮಗ್ರಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು. ಇದಕ್ಕೆ ನಗರಸಭೆಯಿಂದ ಯಾವುದೇ ರೀತಿಯ ಪರಿಹಾರವನ್ನು ನೀಡಲಾಗುವುದಿಲ್ಲ’ ಎಂದು ಎಚ್ಚರಿಸಿದ್ದಾರೆ.