<p><strong>ಚಾಮರಾಜನಗರ:</strong> ಪೋಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಿ.ಸಿ.ಶೃತಿ ಸಲಹೆ ನೀಡಿದರು.</p>.<p>ನಗರದ ಹೊರ ವಲಯದಲ್ಲಿರುವ ಮುರುಘ ರಾಜೇಂದ್ರಸ್ವಾಮಿ ಸಿಬಿಎಸ್ಇ ಶಾಲೆಯ 8ನೇ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣದಿಂದ ಮಾತ್ರ ಮಗುವಿನ ಸರ್ವತೋಮುಖ ಅಭಿವೃದ್ದಿ ಸಾಧ್ಯವಿದ್ದು ಈ ನಿಟ್ಟಿನಲ್ಲಿ ಪೋಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಬೇಕು. ಶಿಕ್ಷಣದಿಂದ ಮಕ್ಕಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು ಎಂದರು.</p>.<p>ಈಚೆಗೆ ಸಾರ್ವಜನಿಕರಲ್ಲಿ ಶಿಕ್ಷಣದ ಮಹತ್ವ ಅರಿವಿಗೆ ಬರುತ್ತಿದ್ದು ಉತ್ತಮ ಶಿಕ್ಷಣ ಕೊಡಿಸಲು ಗ್ರಾಮೀಣ ಭಾಗಗಳನ್ನು ತೊರೆದು ನಗರ ಪ್ರದೇಶಗಳತ್ತ ಹೋಗುತ್ತಿದ್ದಾರೆ. ಮರಿಯಾಲದ ಮುರುಘ ರಾಜೇಂದ್ರಸ್ವಾಮಿ ಶಾಲೆ ಕೂಡ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು ಅನ್ನ ಹಾಗೂ ಜ್ಞಾನ ದಾಸೋಹಕ್ಕೆ ಕೊಡುಗೆ ನೀಡಿದೆ ಎಂದರು.</p>.<p>ಮಕ್ಕಳು ಶಿಕ್ಷಣದ ಜತೆಗೆ ಸಂಸ್ಕಾರವಂತರಾಗಬೇಕು, ಗುರುಗಳ ಮಾರ್ಗದರ್ಶನದೊಂದಿಗೆ ಗುರಿಯೆಡೆಗೆ ಸಾಗಬೇಕು. ಸಾಧಿಸುವ ಛಲದೊಂದಿಗೆ ಮುನ್ನುಗಿದರೆ ಯಶಸ್ಸು ಖಚಿತವಾಗಿ ಸಿಗುತ್ತದೆ ಎಂದರು.</p>.<p>ಸಂಸ್ಥೆಯ ಅಧ್ಯಕ್ಷ ಇಮ್ಮಡಿ ಮುರುಘ ರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಸ್ಥಾಪನೆಯಾಗಿರುವ ಶಾಲೆಯು ಸುತ್ತಮುತ್ತಲಿನ ಗ್ರಾಮದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತದೆ. ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಹಾಗೂ ಮೌಲ್ಯಧಾರಿತ ಶಿಕ್ಷಣಕ್ಕೆ ಶಾಲೆ ಆದ್ಯತೆ ನೀಡಿದೆ ಎಂದರು.</p>.<p>ಮಕ್ಕಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳನ್ನು ಕಲಿಸಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಪ್ರಶ್ನೆ ಮಾಡುವ, ಪ್ರಯೋಗಾತ್ಮಕ ಚುಟವಟಿಕೆಗಳಲ್ಲಿ ಭಾಗವಹಿಸುವಂತೆ ಪೂರಕ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ. ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ವೇದಿಕೆ ಕಲ್ಪಿಸಲಾಗುತ್ತಿದೆ ಎಂದರು.</p>.<p>ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲ ಎಚ್.ಎಂ.ಗಿರೀಶ್, ಸಂಸ್ಥೆಯ ಉಪಾಧ್ಯಕ್ಷ ಕುಮಾರಸ್ವಾಮಿ, ಬ್ರಹ್ಮದೇವ ಬುಕ್ ಡಿಪೋನ ಬ್ರಹ್ಮೇಶ್ ಕುಮಾರ್, ನಿವೃತ ಮುಖ್ಯ ಶಿಕ್ಷಕ ಕೆ.ಎಸ್.ಮಹದೇವಸ್ವಾಮಿ, ಶಿಕ್ಷಕರಾದ ನಿರ್ಮಲಾ ನಾಗೇಂದ್ರ, ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಭಾಗವಹಿಸಿದ್ದರು. ಶಾಲಾ ಮಕ್ಕಳಿಂದ ಕಲಾ ವೈಭವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಪೋಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಿ.ಸಿ.ಶೃತಿ ಸಲಹೆ ನೀಡಿದರು.</p>.<p>ನಗರದ ಹೊರ ವಲಯದಲ್ಲಿರುವ ಮುರುಘ ರಾಜೇಂದ್ರಸ್ವಾಮಿ ಸಿಬಿಎಸ್ಇ ಶಾಲೆಯ 8ನೇ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣದಿಂದ ಮಾತ್ರ ಮಗುವಿನ ಸರ್ವತೋಮುಖ ಅಭಿವೃದ್ದಿ ಸಾಧ್ಯವಿದ್ದು ಈ ನಿಟ್ಟಿನಲ್ಲಿ ಪೋಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಬೇಕು. ಶಿಕ್ಷಣದಿಂದ ಮಕ್ಕಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು ಎಂದರು.</p>.<p>ಈಚೆಗೆ ಸಾರ್ವಜನಿಕರಲ್ಲಿ ಶಿಕ್ಷಣದ ಮಹತ್ವ ಅರಿವಿಗೆ ಬರುತ್ತಿದ್ದು ಉತ್ತಮ ಶಿಕ್ಷಣ ಕೊಡಿಸಲು ಗ್ರಾಮೀಣ ಭಾಗಗಳನ್ನು ತೊರೆದು ನಗರ ಪ್ರದೇಶಗಳತ್ತ ಹೋಗುತ್ತಿದ್ದಾರೆ. ಮರಿಯಾಲದ ಮುರುಘ ರಾಜೇಂದ್ರಸ್ವಾಮಿ ಶಾಲೆ ಕೂಡ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು ಅನ್ನ ಹಾಗೂ ಜ್ಞಾನ ದಾಸೋಹಕ್ಕೆ ಕೊಡುಗೆ ನೀಡಿದೆ ಎಂದರು.</p>.<p>ಮಕ್ಕಳು ಶಿಕ್ಷಣದ ಜತೆಗೆ ಸಂಸ್ಕಾರವಂತರಾಗಬೇಕು, ಗುರುಗಳ ಮಾರ್ಗದರ್ಶನದೊಂದಿಗೆ ಗುರಿಯೆಡೆಗೆ ಸಾಗಬೇಕು. ಸಾಧಿಸುವ ಛಲದೊಂದಿಗೆ ಮುನ್ನುಗಿದರೆ ಯಶಸ್ಸು ಖಚಿತವಾಗಿ ಸಿಗುತ್ತದೆ ಎಂದರು.</p>.<p>ಸಂಸ್ಥೆಯ ಅಧ್ಯಕ್ಷ ಇಮ್ಮಡಿ ಮುರುಘ ರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಸ್ಥಾಪನೆಯಾಗಿರುವ ಶಾಲೆಯು ಸುತ್ತಮುತ್ತಲಿನ ಗ್ರಾಮದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತದೆ. ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಹಾಗೂ ಮೌಲ್ಯಧಾರಿತ ಶಿಕ್ಷಣಕ್ಕೆ ಶಾಲೆ ಆದ್ಯತೆ ನೀಡಿದೆ ಎಂದರು.</p>.<p>ಮಕ್ಕಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳನ್ನು ಕಲಿಸಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಪ್ರಶ್ನೆ ಮಾಡುವ, ಪ್ರಯೋಗಾತ್ಮಕ ಚುಟವಟಿಕೆಗಳಲ್ಲಿ ಭಾಗವಹಿಸುವಂತೆ ಪೂರಕ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ. ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ವೇದಿಕೆ ಕಲ್ಪಿಸಲಾಗುತ್ತಿದೆ ಎಂದರು.</p>.<p>ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲ ಎಚ್.ಎಂ.ಗಿರೀಶ್, ಸಂಸ್ಥೆಯ ಉಪಾಧ್ಯಕ್ಷ ಕುಮಾರಸ್ವಾಮಿ, ಬ್ರಹ್ಮದೇವ ಬುಕ್ ಡಿಪೋನ ಬ್ರಹ್ಮೇಶ್ ಕುಮಾರ್, ನಿವೃತ ಮುಖ್ಯ ಶಿಕ್ಷಕ ಕೆ.ಎಸ್.ಮಹದೇವಸ್ವಾಮಿ, ಶಿಕ್ಷಕರಾದ ನಿರ್ಮಲಾ ನಾಗೇಂದ್ರ, ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಭಾಗವಹಿಸಿದ್ದರು. ಶಾಲಾ ಮಕ್ಕಳಿಂದ ಕಲಾ ವೈಭವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>