ಮಾರ್ಚ್ 4ರಂದು ಸಂಭವಿಸಿದ್ದ ದುರಂತಕ್ಕೆ ಸಂಬಂಧಿಸಿದಂತೆ ಗುಂಡ್ಲುಪೇಟೆ ಠಾಣೆಯಲ್ಲಿ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಕ್ವಾರಿಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ನವೀದ್ ಎಂಬುವವರನ್ನು ಪೊಲೀಸರು ಘಟನೆ ನಡೆದ ದಿನವೇ ಬಂಧಿಸಿದ್ದರು. ಮೊದಲ ಆರೋಪಿ ಮಹೇಂದ್ರಪ್ಪ ಹಾಗೂ ಎರಡನೇ ಆರೋಪಿ, ಕ್ವಾರಿಯನ್ನು ಉಪಗುತ್ತಿಗೆ ಪಡೆದಿದ್ದ ಹಕೀಂ ಅವರು ತಲೆಮರೆಸಿಕೊಂಡಿದ್ದರು.