<p><strong>ಗುಂಡ್ಲುಪೇಟೆ:</strong> ತಾಲ್ಲೂಕಿನ ಮಡಹಳ್ಳಿಯಲ್ಲಿ ಬಿಳಿ ಕಲ್ಲು ಕ್ವಾರಿ ಗುಡ್ಡ ಕುಸಿದು ಎರಡೂವರೆ ತಿಂಗಳು ಕಳೆದರೂ ಪ್ರಕರಣದ ಎರಡನೇ ಆರೋಪಿ ಹಕೀಬ್ ಅವರ ಬಂಧನವಾಗಿಲ್ಲ. ಅವರು ಎಲ್ಲಿದ್ದಾರೆ ಎಂಬುದನ್ನು ಪತ್ತೆ ಮಾಡುವುದಕ್ಕೆ ಪೊಲೀಸರಿಗೆ ಸಾಧ್ಯವಾಗಿಲ್ಲ.</p>.<p>ಮಾರ್ಚ್ 4ರಂದು ಮಡಹಳ್ಳಿ ಕ್ವಾರಿಯ ಗುಡ್ಡ ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿದ್ದರು. ಈ ಪ್ರಕರಣದಲ್ಲಿ ಮೂವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು.</p>.<p>ದುರಂತ ಸಂಭವಿಸಿದ್ದ ದಿನವೇ ಕ್ವಾರಿ ಮ್ಯಾನೇಜರ್ ನವೀದ್ ಎಂಬುವರನ್ನು ಪೊಲೀಸರು ಬಂಧಿಸಿದ್ದರು. ಗುತ್ತಿಗೆ ಪಡೆದಿದ್ದ ಮಹೇಂದ್ರಪ್ಪ ಅವರನ್ನು ನಂತರ ಬಂಧಿಸಲಾಗಿತ್ತು. ಆದರೆ, ಉಪಗುತ್ತಿಗೆ ಪಡೆದಿದ್ದ ಕೇರಳದ ಹಕೀಬ್ ಅವರನ್ನು ಎರಡನೇ ಆರೋಪಿ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.</p>.<p>‘ದುರಂತ ನಡೆದ ಮಾರನೇ ದಿನ ಹಕೀಬ್ ಗುಂಡ್ಲುಪೇಟೆಯಲ್ಲೇ ಇದ್ದರು. ಈ ಸಂದರ್ಭದಲ್ಲಿ ಅವರನ್ನು ಬಂಧಿಸುವುದಕ್ಕೆ ಅವಕಾಶ ಇತ್ತು. ಆದರೆ, ಅವರನ್ನು ಬಂಧಿಸದೇ ತಲೆಮರೆಸಿಕೊಳ್ಳಲು ಪೊಲೀಸರೇ ಅವಕಾಶ ಕೊಟ್ಟಂತಾಗಿದೆ’ ಎಂದು ಸ್ಥಳೀಯರು ಆರೋಪಿಸಿದ್ದಾರೆ.</p>.<p>ಘಟನೆ ನಡೆದು ಕೆಲವು ದಿನಗಳ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ‘ಆರೋಪಿ ಎಲ್ಲೇ ಇದ್ದರೂ ಮೂರು ದಿನಗಳೊಳಗೆ ಬಂಧಿಸಬೇಕು ಎಂದು ಪೊಲೀಸರಿಗೆ ಸೂಚನೆ ನೀಡಿದ್ದೇನೆ’ ಎಂದು ಹೇಳಿದ್ದರು. ಎರಡೂವರೆ ತಿಂಗಳು ಕಳೆದರೂ ಬಂಧನವಾಗಿಲ್ಲ.</p>.<p>ಹಕೀಬ್ ಕೇರಳದ ಸುಲ್ತಾನ್ ಬತ್ತೇರಿಯವರಾಗಿದ್ದು, ಸ್ಥಳೀಯ ಕೆಲ ರಾಜಕಾರಣಿಗಳು ಹಾಗೂ ಉದ್ಯಮಿಗಳ ಜೊತೆ ಉತ್ತಮ ಒಡನಾಟ ಹೊಂದಿದ್ದಾರೆ ಎಂದು ಹೇಳಲಾಗಿದೆ.</p>.<p>ಆರೋಪಿಯ ಪತ್ತೆಗಾಗಿ ಪೊಲೀಸರು ಕೇರಳಕ್ಕೆ ತೆರಳಿ ಅವರ ಕುಟುಂಬದ ಸದಸ್ಯರನ್ನು ವಿಚಾರಣೆ ಮಾಡಿದ್ದಾರೆ. ಆದರೂ ಸುಳಿವು ಸಿಕ್ಕಿಲ್ಲ.</p>.<p>ಹಕೀಬ್ ಅವರು ಪದೇ ಪದೇ ಸ್ಥಳ ಬದಲಾಯಿಸುತ್ತಿರುವುದರಿಂದ ಪತ್ತೆಯಾಗುತ್ತಿಲ್ಲ ಎಂಬುದು ಪೊಲೀಸರ ಸಮಜಾಯಿಷಿ.</p>.<p>ಪ್ರತಿಕ್ರಿಯೆ ಪಡೆಯಲು ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ.ಶಿವಕುಮಾರ್ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್ ಅವರಿಗೆ ಕರೆ ಮಾಡಿದರೂ ಸಂಪರ್ಕ ಸಾಧ್ಯವಾಗಲಿಲ್ಲ.</p>.<p>ಪಟ್ಟಣ ಠಾಣೆ ಇನ್ಸ್ಪೆಕ್ಟರ್ ಮುದ್ದುರಾಜ್ ಪ್ರತಿಕ್ರಿಯಿಸಿ, ‘ಆರೋಪಿ ಪತ್ತೆಗೆ ಹುಡುಕಾಟ ಮುಂದುವರಿದಿದೆ’ ಎಂದು ಹೇಳಿದರು.</p>.<p class="Briefhead"><strong>ಹದ್ದು, ಗರುಡ ರಕ್ಷಣೆ</strong></p>.<p>ಹಕೀಬ್ ಅವರು ಈ ಹಿಂದೆ ಪಟ್ಟಣದ ಹೊರ ವಲಯದಲ್ಲಿಕೃಷಿ ಜಮೀನನ್ನು ಗುತ್ತಿಗೆ ಪಡೆದು ಕುದುರೆ ರೇಸ್ ಆರಂಭಿಸಲು ಪ್ರಯತ್ನ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು.</p>.<p>ಅರಣ್ಯ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿ ಗರುಡ ಹಾಗೂ ಹದ್ದನ್ನು ಸಾಕುತ್ತಿದ್ದರು. ಇದನ್ನು ಗಮನಿಸಿ ಅರಣ್ಯ ಇಲಾಖೆಯವರು ಪ್ರಕರಣ ದಾಖಲು ಮಾಡಿ ಹದ್ದು ಮತ್ತು ಗರುಡ ಪಕ್ಷಿಯನ್ನು ರಕ್ಷಣೆ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ:</strong> ತಾಲ್ಲೂಕಿನ ಮಡಹಳ್ಳಿಯಲ್ಲಿ ಬಿಳಿ ಕಲ್ಲು ಕ್ವಾರಿ ಗುಡ್ಡ ಕುಸಿದು ಎರಡೂವರೆ ತಿಂಗಳು ಕಳೆದರೂ ಪ್ರಕರಣದ ಎರಡನೇ ಆರೋಪಿ ಹಕೀಬ್ ಅವರ ಬಂಧನವಾಗಿಲ್ಲ. ಅವರು ಎಲ್ಲಿದ್ದಾರೆ ಎಂಬುದನ್ನು ಪತ್ತೆ ಮಾಡುವುದಕ್ಕೆ ಪೊಲೀಸರಿಗೆ ಸಾಧ್ಯವಾಗಿಲ್ಲ.</p>.<p>ಮಾರ್ಚ್ 4ರಂದು ಮಡಹಳ್ಳಿ ಕ್ವಾರಿಯ ಗುಡ್ಡ ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿದ್ದರು. ಈ ಪ್ರಕರಣದಲ್ಲಿ ಮೂವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು.</p>.<p>ದುರಂತ ಸಂಭವಿಸಿದ್ದ ದಿನವೇ ಕ್ವಾರಿ ಮ್ಯಾನೇಜರ್ ನವೀದ್ ಎಂಬುವರನ್ನು ಪೊಲೀಸರು ಬಂಧಿಸಿದ್ದರು. ಗುತ್ತಿಗೆ ಪಡೆದಿದ್ದ ಮಹೇಂದ್ರಪ್ಪ ಅವರನ್ನು ನಂತರ ಬಂಧಿಸಲಾಗಿತ್ತು. ಆದರೆ, ಉಪಗುತ್ತಿಗೆ ಪಡೆದಿದ್ದ ಕೇರಳದ ಹಕೀಬ್ ಅವರನ್ನು ಎರಡನೇ ಆರೋಪಿ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.</p>.<p>‘ದುರಂತ ನಡೆದ ಮಾರನೇ ದಿನ ಹಕೀಬ್ ಗುಂಡ್ಲುಪೇಟೆಯಲ್ಲೇ ಇದ್ದರು. ಈ ಸಂದರ್ಭದಲ್ಲಿ ಅವರನ್ನು ಬಂಧಿಸುವುದಕ್ಕೆ ಅವಕಾಶ ಇತ್ತು. ಆದರೆ, ಅವರನ್ನು ಬಂಧಿಸದೇ ತಲೆಮರೆಸಿಕೊಳ್ಳಲು ಪೊಲೀಸರೇ ಅವಕಾಶ ಕೊಟ್ಟಂತಾಗಿದೆ’ ಎಂದು ಸ್ಥಳೀಯರು ಆರೋಪಿಸಿದ್ದಾರೆ.</p>.<p>ಘಟನೆ ನಡೆದು ಕೆಲವು ದಿನಗಳ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ‘ಆರೋಪಿ ಎಲ್ಲೇ ಇದ್ದರೂ ಮೂರು ದಿನಗಳೊಳಗೆ ಬಂಧಿಸಬೇಕು ಎಂದು ಪೊಲೀಸರಿಗೆ ಸೂಚನೆ ನೀಡಿದ್ದೇನೆ’ ಎಂದು ಹೇಳಿದ್ದರು. ಎರಡೂವರೆ ತಿಂಗಳು ಕಳೆದರೂ ಬಂಧನವಾಗಿಲ್ಲ.</p>.<p>ಹಕೀಬ್ ಕೇರಳದ ಸುಲ್ತಾನ್ ಬತ್ತೇರಿಯವರಾಗಿದ್ದು, ಸ್ಥಳೀಯ ಕೆಲ ರಾಜಕಾರಣಿಗಳು ಹಾಗೂ ಉದ್ಯಮಿಗಳ ಜೊತೆ ಉತ್ತಮ ಒಡನಾಟ ಹೊಂದಿದ್ದಾರೆ ಎಂದು ಹೇಳಲಾಗಿದೆ.</p>.<p>ಆರೋಪಿಯ ಪತ್ತೆಗಾಗಿ ಪೊಲೀಸರು ಕೇರಳಕ್ಕೆ ತೆರಳಿ ಅವರ ಕುಟುಂಬದ ಸದಸ್ಯರನ್ನು ವಿಚಾರಣೆ ಮಾಡಿದ್ದಾರೆ. ಆದರೂ ಸುಳಿವು ಸಿಕ್ಕಿಲ್ಲ.</p>.<p>ಹಕೀಬ್ ಅವರು ಪದೇ ಪದೇ ಸ್ಥಳ ಬದಲಾಯಿಸುತ್ತಿರುವುದರಿಂದ ಪತ್ತೆಯಾಗುತ್ತಿಲ್ಲ ಎಂಬುದು ಪೊಲೀಸರ ಸಮಜಾಯಿಷಿ.</p>.<p>ಪ್ರತಿಕ್ರಿಯೆ ಪಡೆಯಲು ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ.ಶಿವಕುಮಾರ್ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್ ಅವರಿಗೆ ಕರೆ ಮಾಡಿದರೂ ಸಂಪರ್ಕ ಸಾಧ್ಯವಾಗಲಿಲ್ಲ.</p>.<p>ಪಟ್ಟಣ ಠಾಣೆ ಇನ್ಸ್ಪೆಕ್ಟರ್ ಮುದ್ದುರಾಜ್ ಪ್ರತಿಕ್ರಿಯಿಸಿ, ‘ಆರೋಪಿ ಪತ್ತೆಗೆ ಹುಡುಕಾಟ ಮುಂದುವರಿದಿದೆ’ ಎಂದು ಹೇಳಿದರು.</p>.<p class="Briefhead"><strong>ಹದ್ದು, ಗರುಡ ರಕ್ಷಣೆ</strong></p>.<p>ಹಕೀಬ್ ಅವರು ಈ ಹಿಂದೆ ಪಟ್ಟಣದ ಹೊರ ವಲಯದಲ್ಲಿಕೃಷಿ ಜಮೀನನ್ನು ಗುತ್ತಿಗೆ ಪಡೆದು ಕುದುರೆ ರೇಸ್ ಆರಂಭಿಸಲು ಪ್ರಯತ್ನ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು.</p>.<p>ಅರಣ್ಯ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿ ಗರುಡ ಹಾಗೂ ಹದ್ದನ್ನು ಸಾಕುತ್ತಿದ್ದರು. ಇದನ್ನು ಗಮನಿಸಿ ಅರಣ್ಯ ಇಲಾಖೆಯವರು ಪ್ರಕರಣ ದಾಖಲು ಮಾಡಿ ಹದ್ದು ಮತ್ತು ಗರುಡ ಪಕ್ಷಿಯನ್ನು ರಕ್ಷಣೆ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>