ಕೊಳ್ಳೇಗಾಲದ ಯೂನಿಯನ್ ಕ್ಲಬ್ನಲ್ಲಿ ರಕ್ತದಾನ ಶಿಬಿರ ಹಾಗೂ ಕಣ್ಣಿನ ತಪಾಸಣಾ ಶಿಬಿರವನ್ನೂ ಅಭಿಮಾನಿಗಳು ಹಮ್ಮಿಕೊಂಡಿದ್ದಾರೆ. ಗುಂಡ್ಲುಪೇಟೆಯ ಪೃಥ್ವಿ ಬುದ್ಧಿಮಾಂದ್ಯ ಶಾಲಾ ಮಕ್ಕಳಿಗೆ ಊಟದ ವ್ಯವಸ್ಥೆ, ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಕಾರ್ಯ ನಡೆಯಲಿದೆ. ಹನೂರು ತಾಲ್ಲೂಕಿನ ಕೌದಳ್ಳಿಯ ವೃದ್ಧಾಶ್ರಮ ವಾಸಿಗಳಿಗೆ ಊಟದ ವ್ಯವಸ್ಥೆಯೂ ಇರಲಿದೆ.