ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

ಮಳೆ: ಮುನ್ನೆಚ್ಚರಿಕೆ ವಹಿಸಲು ಚಾಮರಾಜನಗರ ಡಿ.ಸಿ ಸೂಚನೆ

ಜನ ಜಾನುವಾರು ಜೀವ ಹಾನಿಯಾಗದಂತೆ ನೋಡಿಕೊಳ್ಳಿ: ಶಿಲ್ಪಾನಾಗ್‌
Published : 23 ಮೇ 2024, 16:16 IST
Last Updated : 23 ಮೇ 2024, 16:16 IST
ಫಾಲೋ ಮಾಡಿ
Comments
ರಸ್ತೆ ಗುಂಡಿ ಮುಚ್ಚಿ
‘ಮಳೆಯಿಂದ ರಸ್ತೆಗಳಲ್ಲಿ ಉಂಟಾಗುವ ಗುಂಡಿಗಳನ್ನು ಶೀಘ್ರವಾಗಿ ಮುಚ್ಚುವ ಕೆಲಸ ಆಗಬೇಕು. ಇದರಿಂದ ಅಪಘಾತಗಳು ಕಡಿಮೆಯಾಗಿ ವಾಹನ ಸವಾರರಿಗೆ ಅನುಕೂಲವಾಗವಾಲಿದೆ. ನಗರದಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ರಾಜಕಾಲುವೆ ಹಾಗೂ ಇತರೆ ಚರಂಡಿ ಮಾರ್ಗಗಳನ್ನು ಸ್ವಚ್ಛಗೊಳಿಸಲು ಕೂಡಲೇ ಕ್ರಮವಹಿಸಬೇಕು. ಕಟ್ಟಿಕೊಂಡಿರುವ ಚರಂಡಿಗಳಲ್ಲಿ ಹೂಳೆತ್ತಿಸಿ ಸ್ವಚ್ಚಗೊಳಿಸಬೇಕು’ ಎಂದು ಜಿಲ್ಲಾಧಿಕಾರಿ ಸೂಚಿಸಿದರು. ‘ಜಿಲ್ಲೆಯಲ್ಲಿರುವ ಕ್ವಾರಿಗಳಲ್ಲಿ ನೀರು ನಿಲ್ಲುವುದರಿಂದ ಅವಘಡಗಳು ಜರುಗದಂತೆ ನೋಡಿಕೊಳ್ಳಬೇಕು. ಜನರು ಕ್ವಾರಿಯ ಸುತ್ತ ಒಡಾಡದಂತೆ ಬೇಲಿ ಮಾಡುವ ಕಾರ್ಯ ತ್ವರಿತಗತಿಯಲ್ಲಿ ಆಗಬೇಕು. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಕ್ವಾರಿಗಳ ಉಸ್ತುವಾರಿಗೆ ತಾಲ್ಲೂಕು ಮಟ್ಟದ ನೋಡೆಲ್ ಅಧಿಕಾರಿಗಳನ್ನು ನೇಮಿಸಬೇಕು’ ಎಂದು ಹೇಳಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT