ಪಟ್ಟಣದಲ್ಲಿ ಸುರಿದ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಯಿತು. ಪಟ್ಟಣದ ಬಸ್ ನಿಲ್ದಾಣ, ಮಡಹಳ್ಳಿ ವೃತ್ತದಲ್ಲಿ ನೀರು ನಿಂತು ಸಂಚಾರ ಮಾಡುವವರಿಗೆ ತೊಂದರೆಯಾಯಿತು. ಪೋಲಿಸ್ ಠಾಣೆಯ ರಸ್ತೆಯಲ್ಲಿ ಮತ್ತು ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಇರುವ ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯದಿರುವುದರಿಂದ ರಸ್ತೆಯಲ್ಲಿ ನೀರು ಹರಿದು ವಾಹನ ಸವಾರರು ಮತ್ತು ಸಾರ್ವಜನಿಕರು ಕಿರಿ ಕಿರಿ ಅನುಭವಿಸಿದರು.