<p><strong>ಚಾಮರಾಜನಗರ:</strong> ಕೇಂದ್ರ ಸರ್ಕಾರವು ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಹೊರಟಿರುವುದನ್ನು ಖಂಡಿಸಿ ಇದೇ 10ರಂದು ರೈಜ್ಯ ರೈತ ಸಂಘವು ನಗರದಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳ ಜೊತೆಗೂಡಿ ಬೃಹತ್ ಪ್ರತಿಭಟನೆ ನಡೆಸಲಿದೆ.</p>.<p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹೊನ್ನೂರು ಪ್ರಕಾಶ್ ಅವರು, ‘ಕೇಂದ್ರ ಸರ್ಕಾರವು ಎಲ್ಲ ವಲಯಗಳನ್ನು ಖಾಸಗೀಕರಣ ಮಾಡಲು ಹೊರಟಿದೆ. ಆ ಮೂಲಕ ರೈತ ಜಮೀನುಗಳನ್ನು ಕಿತ್ತು ಕಾರ್ಪೊರೇಟ್ ವಲಯಕ್ಕೆ ಕೊಡುವ ಹುನ್ನಾರ ಅಡಗಿದೆ. ಇದನ್ನು ವಿರೋಧಿಸಿ ಎರಡು ಹಂತಗಳಲ್ಲಿ ಹಂತಗಳಲ್ಲಿ ಪ್ರತಿಭಟನೆ ನಡೆಸಲಾಗುವುದು. ಮೊದಲ ಹಂತದಲ್ಲಿ ಅಸಹಕಾರ ಚಳವಳಿ, ಎರಡನೇ ಹಂತದಲ್ಲಿ ಎಲ್ಲ ಶಾಸಕರ ಮನೆ ಮುಂದೆ ಕುಳಿತು ಚಳವಳಿ ಮಾಡಲಾಗುವುದು’ ಎಂದರು.</p>.<p>10ರಂದುನಗರದ ಪ್ರವಾಸಿ ಮಂದಿರದಿಂದ ಮೆರವಣಿಗೆ ಹೊರಟು ಜಿಲ್ಲಾಡಳಿತ ಭವನಕ್ಕೆ ತೆರಳಿ ಪ್ರತಿಭಟನೆ ನಡೆಸಲಾಗುವುದು ಎಂದರು.</p>.<p><a href="https://www.prajavani.net/district/belagavi/flood-and-heavy-rain-7800-crore-loss-in-belagavi-855235.html" itemprop="url">ಪ್ರವಾಹ, ಅತಿವೃಷ್ಟಿಯಿಂದ ಬೆಳಗಾವಿ ಜಿಲ್ಲೆಯಲ್ಲಿ ₹7,800 ಕೋಟಿ ಹಾನಿ: ಕಾರಜೋಳ </a></p>.<p>ಧ್ವಜಾರೋಹಣಕ್ಕೆ ಬಿಡುವುದಿಲ್ಲ: ‘ರೈತ ವಿರೋಧಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ವಾಪಸ್ ಪಡೆಯದಿದ್ದರೆ, ಆಗಸ್ಟ್ 15ರಂದು ಯಾವುದೇ ಬಿಜೆಪಿ ಸಚಿವರು ಹಾಗೂ ಮುಖಂಡರು ಧ್ವಜಾರೋಹಣ ಮಾಡುವುದಕ್ಕೆ ಅವಕಾಶ ಕೊಡುವುದಿಲ್ಲ’ ಎಂದು ಅವರು ಎಚ್ಚರಿಸಿದರು.</p>.<p>‘ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹಾಗೂ ಸಾರ್ವಜನಿಕವಾಗಿ ಚರ್ಚೆ ಮಾಡದೇ ರೈತ ವಿರೋಧಿ ಕಾನೂನುಗಳನ್ನು ಜಾರಿಗೆ ತರುತ್ತಿದೆ. ಕಾನೂನುಗಳನ್ನು ವಾಪಸ್ ಪಡೆಯದಿದ್ದರೆ ಮುಂದಿನ ಚುನಾವಣೆಯಲ್ಲಿ ಇವರನ್ನು ಕಿತ್ತೊಗೆಯಲಾಗುವುದು’ ಎಂದು ಹೊನ್ನೂರು ಪ್ರಕಾಶ್ ಅವರು ಹೇಳಿದರು.</p>.<p>ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ಅವರು ಮಾತನಾಡಿ, ‘10ರಂದು ನಡೆಯಲಿರುವ ಪ್ರತಿಭಟನೆಯಲ್ಲಿ ವಿದ್ಯುತ್ ಇಲಾಖೆಯ ಎಲ್ಲ ನೌಕರರೂ ಪಾಲ್ಗೊಳ್ಳುತ್ತಾರೆ. ಅಲ್ಲದೇ ದೇಶದಾದ್ಯಂತ ಚಳವಳಿ ಹಮ್ಮಿಕೊಳ್ಳಲಾಗುವುದು’ ಎಂದರು.</p>.<p>ರೈತ ಮುಖಂಡರಾದ ಮಾಡ್ರಳ್ಳಿ ಮಹದೇವಪ್ಪ, ಹೊನ್ನೂರು ಬಸವಣ್ಣ, ಚಂಗಡಿ ಕರಿಯಪ್ಪ ಇದ್ದರು.</p>.<p><a href="https://www.prajavani.net/district/haveri/cm-basavaraj-bommai-assures-nehru-olekar-to-give-next-chance-855236.html" itemprop="url">ಮುಂದಿನ ಸಂಪುಟ ವಿಸ್ತರಣೆಯಲ್ಲಿ ಅವಕಾಶ: ಓಲೇಕಾರಗೆ ಸಿಎಂ ಭರವಸೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಕೇಂದ್ರ ಸರ್ಕಾರವು ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಹೊರಟಿರುವುದನ್ನು ಖಂಡಿಸಿ ಇದೇ 10ರಂದು ರೈಜ್ಯ ರೈತ ಸಂಘವು ನಗರದಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳ ಜೊತೆಗೂಡಿ ಬೃಹತ್ ಪ್ರತಿಭಟನೆ ನಡೆಸಲಿದೆ.</p>.<p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹೊನ್ನೂರು ಪ್ರಕಾಶ್ ಅವರು, ‘ಕೇಂದ್ರ ಸರ್ಕಾರವು ಎಲ್ಲ ವಲಯಗಳನ್ನು ಖಾಸಗೀಕರಣ ಮಾಡಲು ಹೊರಟಿದೆ. ಆ ಮೂಲಕ ರೈತ ಜಮೀನುಗಳನ್ನು ಕಿತ್ತು ಕಾರ್ಪೊರೇಟ್ ವಲಯಕ್ಕೆ ಕೊಡುವ ಹುನ್ನಾರ ಅಡಗಿದೆ. ಇದನ್ನು ವಿರೋಧಿಸಿ ಎರಡು ಹಂತಗಳಲ್ಲಿ ಹಂತಗಳಲ್ಲಿ ಪ್ರತಿಭಟನೆ ನಡೆಸಲಾಗುವುದು. ಮೊದಲ ಹಂತದಲ್ಲಿ ಅಸಹಕಾರ ಚಳವಳಿ, ಎರಡನೇ ಹಂತದಲ್ಲಿ ಎಲ್ಲ ಶಾಸಕರ ಮನೆ ಮುಂದೆ ಕುಳಿತು ಚಳವಳಿ ಮಾಡಲಾಗುವುದು’ ಎಂದರು.</p>.<p>10ರಂದುನಗರದ ಪ್ರವಾಸಿ ಮಂದಿರದಿಂದ ಮೆರವಣಿಗೆ ಹೊರಟು ಜಿಲ್ಲಾಡಳಿತ ಭವನಕ್ಕೆ ತೆರಳಿ ಪ್ರತಿಭಟನೆ ನಡೆಸಲಾಗುವುದು ಎಂದರು.</p>.<p><a href="https://www.prajavani.net/district/belagavi/flood-and-heavy-rain-7800-crore-loss-in-belagavi-855235.html" itemprop="url">ಪ್ರವಾಹ, ಅತಿವೃಷ್ಟಿಯಿಂದ ಬೆಳಗಾವಿ ಜಿಲ್ಲೆಯಲ್ಲಿ ₹7,800 ಕೋಟಿ ಹಾನಿ: ಕಾರಜೋಳ </a></p>.<p>ಧ್ವಜಾರೋಹಣಕ್ಕೆ ಬಿಡುವುದಿಲ್ಲ: ‘ರೈತ ವಿರೋಧಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ವಾಪಸ್ ಪಡೆಯದಿದ್ದರೆ, ಆಗಸ್ಟ್ 15ರಂದು ಯಾವುದೇ ಬಿಜೆಪಿ ಸಚಿವರು ಹಾಗೂ ಮುಖಂಡರು ಧ್ವಜಾರೋಹಣ ಮಾಡುವುದಕ್ಕೆ ಅವಕಾಶ ಕೊಡುವುದಿಲ್ಲ’ ಎಂದು ಅವರು ಎಚ್ಚರಿಸಿದರು.</p>.<p>‘ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹಾಗೂ ಸಾರ್ವಜನಿಕವಾಗಿ ಚರ್ಚೆ ಮಾಡದೇ ರೈತ ವಿರೋಧಿ ಕಾನೂನುಗಳನ್ನು ಜಾರಿಗೆ ತರುತ್ತಿದೆ. ಕಾನೂನುಗಳನ್ನು ವಾಪಸ್ ಪಡೆಯದಿದ್ದರೆ ಮುಂದಿನ ಚುನಾವಣೆಯಲ್ಲಿ ಇವರನ್ನು ಕಿತ್ತೊಗೆಯಲಾಗುವುದು’ ಎಂದು ಹೊನ್ನೂರು ಪ್ರಕಾಶ್ ಅವರು ಹೇಳಿದರು.</p>.<p>ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ಅವರು ಮಾತನಾಡಿ, ‘10ರಂದು ನಡೆಯಲಿರುವ ಪ್ರತಿಭಟನೆಯಲ್ಲಿ ವಿದ್ಯುತ್ ಇಲಾಖೆಯ ಎಲ್ಲ ನೌಕರರೂ ಪಾಲ್ಗೊಳ್ಳುತ್ತಾರೆ. ಅಲ್ಲದೇ ದೇಶದಾದ್ಯಂತ ಚಳವಳಿ ಹಮ್ಮಿಕೊಳ್ಳಲಾಗುವುದು’ ಎಂದರು.</p>.<p>ರೈತ ಮುಖಂಡರಾದ ಮಾಡ್ರಳ್ಳಿ ಮಹದೇವಪ್ಪ, ಹೊನ್ನೂರು ಬಸವಣ್ಣ, ಚಂಗಡಿ ಕರಿಯಪ್ಪ ಇದ್ದರು.</p>.<p><a href="https://www.prajavani.net/district/haveri/cm-basavaraj-bommai-assures-nehru-olekar-to-give-next-chance-855236.html" itemprop="url">ಮುಂದಿನ ಸಂಪುಟ ವಿಸ್ತರಣೆಯಲ್ಲಿ ಅವಕಾಶ: ಓಲೇಕಾರಗೆ ಸಿಎಂ ಭರವಸೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>