<p><strong>ಚಾಮರಾಜನಗರ</strong>: ಬರ ಹಾಗೂ ಇತ್ತೀಚೆಗೆ ಸುರಿದ ಗಾಳಿ ಮಳೆಯಿಂದ ಬೆಳೆ ನಷ್ಟ ಅನುಭವಿಸಿದ ರೈತರಿಗೆ ವೈಜ್ಞಾನಿಕ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಘಟಕವು ಜಿಲ್ಲಾಡಳಿತಕ್ಕೆ ಮನವಿ ಮಾಡಿದೆ. </p>.<p>ಸಂಘದ ಪದಾಧಿಕಾರಿಗಳು ಬುಧವಾರ ಹೆಚ್ಚವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಕೃಷಿ ಇಲಾಖೆ ಉಪನಿರ್ದೇಶಕಿ ಸುಷ್ಮಾ ಇದ್ದರು.</p>.<p>‘ಮೂರು ದಿನಗಳ ಅವಧಿಯಲ್ಲಿ ಸುರಿದ ಗಾಳಿ ಮಳೆಗೆ ಜಿಲ್ಲೆಯಲ್ಲಿ 1,250 ಎಕರೆ ಬಾಳೆ ನಾಶವಾಗಿದ್ದು, ಸರ್ಕಾರ ಎನ್ಡಿಆರ್ಎಫ್ ಮಾನದಂಡದ ಅಡಿಯಲ್ಲಿ ಎಕರೆಗೆ ₹6,800 ಪರಿಹಾರ ನೀಡುತ್ತದೆ. ಒಂದು ಎಕರೆ ಬಾಳೆ ಬೆಳೆಯಲು ₹1 ಲಕ್ಷಕ್ಕೂ ಹೆಚ್ಚು ಖರ್ಚಾಗುತ್ತದೆ. ಆದರೆ ಪರಿಹಾರ ವೆಚ್ಚದ ಶೇ 5ರಷ್ಟನ್ನೂ ಕೊಡುವುದಿಲ್ಲ’ ಎಂದು ಮನವಿಯಲ್ಲಿ ಹೇಳಲಾಗಿದೆ. </p>.<p>‘ಸರ್ಕಾರ ಯಾವ ಮಾನದಂಡದ ಮೇಲೆ ಪರಿಹಾರ ಕೊಡುತ್ತಿದೆ ಎಂಬುದೇ ಗೊತ್ತಾಗುತ್ತಿಲ್ಲ. ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಉಸ್ತುವಾರಿ ಸಚಿವರು ಕೂಡಲೇ ಈ ಬಗ್ಗೆ ಗಮನ ಇರಿಸಿ ಬರದಿಂದ ತತ್ತರಿಸಿರುವ ರೈತರಿಗೆ ಎಕರೆಗೆ ಕನಿಷ್ಠ ₹1 ಲಕ್ಷ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಲಾಗಿದೆ. </p>.<p>‘ಚುನಾವಣಾ ನೀತಿ ಸಂಹಿತೆ ಮುಗಿದ ವಾರದೊಳಗೆ ವೈಜ್ಞಾನಿಕವಾಗಿ ಪರಿಹಾರ ನೀಡಿದಿದ್ದರೆ, ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ’ ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.</p>.<p>ಸಂಘದ ಹೊನ್ನೂರು ಪ್ರಕಾಶ್, ವೀರನಪುರದ ನಾಗಪ್ಪ, ಮಹೇಶ್, ಸುರೇಶ್, ಜಗದೀಶ್, ಮಾದೇವ ನಾಯಕ, ಪುಟ್ಟೇಗೌಡ, ಮಾಡ್ರಳ್ಳಿ ಪಾಪಣ್ಣ, ಮಂಜಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ಬರ ಹಾಗೂ ಇತ್ತೀಚೆಗೆ ಸುರಿದ ಗಾಳಿ ಮಳೆಯಿಂದ ಬೆಳೆ ನಷ್ಟ ಅನುಭವಿಸಿದ ರೈತರಿಗೆ ವೈಜ್ಞಾನಿಕ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಘಟಕವು ಜಿಲ್ಲಾಡಳಿತಕ್ಕೆ ಮನವಿ ಮಾಡಿದೆ. </p>.<p>ಸಂಘದ ಪದಾಧಿಕಾರಿಗಳು ಬುಧವಾರ ಹೆಚ್ಚವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಕೃಷಿ ಇಲಾಖೆ ಉಪನಿರ್ದೇಶಕಿ ಸುಷ್ಮಾ ಇದ್ದರು.</p>.<p>‘ಮೂರು ದಿನಗಳ ಅವಧಿಯಲ್ಲಿ ಸುರಿದ ಗಾಳಿ ಮಳೆಗೆ ಜಿಲ್ಲೆಯಲ್ಲಿ 1,250 ಎಕರೆ ಬಾಳೆ ನಾಶವಾಗಿದ್ದು, ಸರ್ಕಾರ ಎನ್ಡಿಆರ್ಎಫ್ ಮಾನದಂಡದ ಅಡಿಯಲ್ಲಿ ಎಕರೆಗೆ ₹6,800 ಪರಿಹಾರ ನೀಡುತ್ತದೆ. ಒಂದು ಎಕರೆ ಬಾಳೆ ಬೆಳೆಯಲು ₹1 ಲಕ್ಷಕ್ಕೂ ಹೆಚ್ಚು ಖರ್ಚಾಗುತ್ತದೆ. ಆದರೆ ಪರಿಹಾರ ವೆಚ್ಚದ ಶೇ 5ರಷ್ಟನ್ನೂ ಕೊಡುವುದಿಲ್ಲ’ ಎಂದು ಮನವಿಯಲ್ಲಿ ಹೇಳಲಾಗಿದೆ. </p>.<p>‘ಸರ್ಕಾರ ಯಾವ ಮಾನದಂಡದ ಮೇಲೆ ಪರಿಹಾರ ಕೊಡುತ್ತಿದೆ ಎಂಬುದೇ ಗೊತ್ತಾಗುತ್ತಿಲ್ಲ. ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಉಸ್ತುವಾರಿ ಸಚಿವರು ಕೂಡಲೇ ಈ ಬಗ್ಗೆ ಗಮನ ಇರಿಸಿ ಬರದಿಂದ ತತ್ತರಿಸಿರುವ ರೈತರಿಗೆ ಎಕರೆಗೆ ಕನಿಷ್ಠ ₹1 ಲಕ್ಷ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಲಾಗಿದೆ. </p>.<p>‘ಚುನಾವಣಾ ನೀತಿ ಸಂಹಿತೆ ಮುಗಿದ ವಾರದೊಳಗೆ ವೈಜ್ಞಾನಿಕವಾಗಿ ಪರಿಹಾರ ನೀಡಿದಿದ್ದರೆ, ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ’ ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.</p>.<p>ಸಂಘದ ಹೊನ್ನೂರು ಪ್ರಕಾಶ್, ವೀರನಪುರದ ನಾಗಪ್ಪ, ಮಹೇಶ್, ಸುರೇಶ್, ಜಗದೀಶ್, ಮಾದೇವ ನಾಯಕ, ಪುಟ್ಟೇಗೌಡ, ಮಾಡ್ರಳ್ಳಿ ಪಾಪಣ್ಣ, ಮಂಜಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>