ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ | ಬೆಳೆ ನಷ್ಟ: ವೈಜ್ಞಾನಿಕ ಪರಿಹಾರಕ್ಕೆ ಒತ್ತಾಯ

Published 8 ಮೇ 2024, 15:55 IST
Last Updated 8 ಮೇ 2024, 15:55 IST
ಅಕ್ಷರ ಗಾತ್ರ

ಚಾಮರಾಜನಗರ: ಬರ ಹಾಗೂ ಇತ್ತೀಚೆಗೆ ಸುರಿದ ಗಾಳಿ ಮಳೆಯಿಂದ ಬೆಳೆ ನಷ್ಟ ಅನುಭವಿಸಿದ ರೈತರಿಗೆ ವೈಜ್ಞಾನಿಕ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಘಟಕವು ಜಿಲ್ಲಾಡಳಿತಕ್ಕೆ ಮನವಿ ಮಾಡಿದೆ. 

ಸಂಘದ ಪದಾಧಿಕಾರಿಗಳು ಬುಧವಾರ ಹೆಚ್ಚವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಕೃಷಿ ಇಲಾಖೆ ಉಪನಿರ್ದೇಶಕಿ ಸುಷ್ಮಾ ಇದ್ದರು.

‘ಮೂರು ದಿನಗಳ ಅವಧಿಯಲ್ಲಿ ಸುರಿದ ಗಾಳಿ ಮಳೆಗೆ ಜಿಲ್ಲೆಯಲ್ಲಿ 1,250 ಎಕರೆ ಬಾಳೆ ನಾಶವಾಗಿದ್ದು, ಸರ್ಕಾರ ಎನ್‌ಡಿಆರ್‌ಎಫ್‌ ಮಾನದಂಡದ ಅಡಿಯಲ್ಲಿ ಎಕರೆಗೆ ₹6,800 ಪರಿಹಾರ ನೀಡುತ್ತದೆ. ಒಂದು ಎಕರೆ ಬಾಳೆ ಬೆಳೆಯಲು ₹1 ಲಕ್ಷಕ್ಕೂ ಹೆಚ್ಚು ಖರ್ಚಾಗುತ್ತದೆ. ಆದರೆ ಪರಿಹಾರ ವೆಚ್ಚದ ಶೇ 5ರಷ್ಟನ್ನೂ ಕೊಡುವುದಿಲ್ಲ’ ಎಂದು ಮನವಿಯಲ್ಲಿ ಹೇಳಲಾಗಿದೆ. 

‘ಸರ್ಕಾರ ಯಾವ ಮಾನದಂಡದ ಮೇಲೆ ಪರಿಹಾರ ಕೊಡುತ್ತಿದೆ ಎಂಬುದೇ ಗೊತ್ತಾಗುತ್ತಿಲ್ಲ. ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಉಸ್ತುವಾರಿ ಸಚಿವರು ಕೂಡಲೇ ಈ ಬಗ್ಗೆ ಗಮನ ಇರಿಸಿ ಬರದಿಂದ ತತ್ತರಿಸಿರುವ ರೈತರಿಗೆ ಎಕರೆಗೆ ಕನಿಷ್ಠ ₹1 ಲಕ್ಷ ಪರಿಹಾರ ನೀಡಬೇಕು’ ಎಂದು  ಒತ್ತಾಯಿಸಲಾಗಿದೆ. 

‘ಚುನಾವಣಾ ನೀತಿ ಸಂಹಿತೆ ಮುಗಿದ ವಾರದೊಳಗೆ ವೈಜ್ಞಾನಿಕವಾಗಿ ಪರಿಹಾರ ನೀಡಿದಿದ್ದರೆ, ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ’ ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಸಂಘದ ಹೊನ್ನೂರು ಪ್ರಕಾಶ್‌, ವೀರನಪುರದ ನಾಗಪ್ಪ, ಮಹೇಶ್, ಸುರೇಶ್, ಜಗದೀಶ್, ಮಾದೇವ ನಾಯಕ, ಪುಟ್ಟೇಗೌಡ, ಮಾಡ್ರಳ್ಳಿ ಪಾಪಣ್ಣ, ಮಂಜಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT