<p><strong>ಚಾಮರಾಜನಗರ</strong>: ತಾಲ್ಲೂಕಿನ ಹರದನಹಳ್ಳಿಯಲ್ಲಿರುವ ಕಾಮಾಕ್ಷಾಂಬಾ ಸಮೇತ ದಿವ್ಯಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ₹ 3.62 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ರಾಜಗೋಪುರಕ್ಕೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಿದರು.</p>.<p>ಈ ಸಂದರ್ಭ ಮಾತನಾಡಿದ ಶಾಸಕರು 2005ರ ನ.4ರಂದು ಭಾರಿ ಮಳೆಗೆ ದೇವಸ್ಥಾನದ ರಾಜಗೋಪುರ ಕುಸಿದಿತ್ತು. 709 ವರ್ಷಗಳಷ್ಟು ಹಳೆಯ ದೇವಸ್ಥಾನದ ರಾಜಗೋಪುರ ನಿರ್ಮಾಣಕ್ಕೆ ನಿರಂತರ ಪ್ರಯತ್ನ ಮಾಡಲಾಗಿತ್ತು. </p>.<p>ಫಲವಾಗಿ 3.62 ಕೋಟಿ ವೆಚ್ಚದಲ್ಲಿ ರಾಜಗೋಪುರ ಕಾಮಗಾರಿ ನಡೆಯಲಿದ್ದು ಹರದನಹಳ್ಳಿ, ಬಂಡಿಗೆರೆ, ಅಮಚವಾಡಿ, ವೆಂಕಟಯ್ಯನಛತ್ರ ಗ್ರಾಮಸ್ಥರು ಸಹಕಾರ ನೀಡಬೇಕು ಎಂದು ತಿಳಿಸಿದರು.</p>.<p>ಇದೇವೇಳೆ ಕಾಮಾಕ್ಷಾಂಬಾ ಸಮೇತ ದಿವ್ಯಲಿಂಗೇಶ್ವರ ಸ್ವಾಮಿ ದೇವರಿಗೆ ವಿಶೇಷ ಪೂಜೆ ನಡೆಯಿತು. ಗಣಪತಿ, ನವಗ್ರಹ ಹೋಮಗಳು ನಡೆದವು. ತಲಕಾಡಿನಿಂದ ಗೋಪುರ ನಿರ್ಮಾಣಕ್ಕೆ ಬಂದಿರುವ ಸ್ಥಪತಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭ ಹರದನಹಳ್ಳಿ, ಬಂಡಿಗೆರೆ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು, ತಮಿಳುನಾಡಿನ ಭಕ್ತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ತಾಲ್ಲೂಕಿನ ಹರದನಹಳ್ಳಿಯಲ್ಲಿರುವ ಕಾಮಾಕ್ಷಾಂಬಾ ಸಮೇತ ದಿವ್ಯಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ₹ 3.62 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ರಾಜಗೋಪುರಕ್ಕೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಿದರು.</p>.<p>ಈ ಸಂದರ್ಭ ಮಾತನಾಡಿದ ಶಾಸಕರು 2005ರ ನ.4ರಂದು ಭಾರಿ ಮಳೆಗೆ ದೇವಸ್ಥಾನದ ರಾಜಗೋಪುರ ಕುಸಿದಿತ್ತು. 709 ವರ್ಷಗಳಷ್ಟು ಹಳೆಯ ದೇವಸ್ಥಾನದ ರಾಜಗೋಪುರ ನಿರ್ಮಾಣಕ್ಕೆ ನಿರಂತರ ಪ್ರಯತ್ನ ಮಾಡಲಾಗಿತ್ತು. </p>.<p>ಫಲವಾಗಿ 3.62 ಕೋಟಿ ವೆಚ್ಚದಲ್ಲಿ ರಾಜಗೋಪುರ ಕಾಮಗಾರಿ ನಡೆಯಲಿದ್ದು ಹರದನಹಳ್ಳಿ, ಬಂಡಿಗೆರೆ, ಅಮಚವಾಡಿ, ವೆಂಕಟಯ್ಯನಛತ್ರ ಗ್ರಾಮಸ್ಥರು ಸಹಕಾರ ನೀಡಬೇಕು ಎಂದು ತಿಳಿಸಿದರು.</p>.<p>ಇದೇವೇಳೆ ಕಾಮಾಕ್ಷಾಂಬಾ ಸಮೇತ ದಿವ್ಯಲಿಂಗೇಶ್ವರ ಸ್ವಾಮಿ ದೇವರಿಗೆ ವಿಶೇಷ ಪೂಜೆ ನಡೆಯಿತು. ಗಣಪತಿ, ನವಗ್ರಹ ಹೋಮಗಳು ನಡೆದವು. ತಲಕಾಡಿನಿಂದ ಗೋಪುರ ನಿರ್ಮಾಣಕ್ಕೆ ಬಂದಿರುವ ಸ್ಥಪತಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭ ಹರದನಹಳ್ಳಿ, ಬಂಡಿಗೆರೆ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು, ತಮಿಳುನಾಡಿನ ಭಕ್ತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>