<p><strong>ಚಾಮರಾಜನಗರ:</strong>ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ವರನಟ ಡಾ.ರಾಜ್ಕುಮಾರ್ ಅವರ 92ನೇ ಜನ್ಮದಿನವನ್ನು ಶುಕ್ರವಾರ ಅತ್ಯಂತ ಸರಳವಾಗಿ ನಗರದಲ್ಲಿ ಆಚರಿಸಲಾಯಿತು. </p>.<p>ಡಾ.ರಾಜ್ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು, ‘ಪರಿಶ್ರಮ, ಶ್ರದ್ಧೆ, ಬದ್ಧತೆ ಹಾಗೂ ಕಾಯಕದಲ್ಲಿ ಅಸಾಮಾನ್ಯ ಸಾಧನೆ ಮಾಡಿದ ಡಾ. ರಾಜ್ಕುಮಾರ್ ಅವರು ಕನ್ನಡ ಸಂಸ್ಕೃತಿಯ ಅಸ್ಮಿತೆಯಾಗಿದ್ದಾರೆ’ ಎಂದು ಪ್ರತಿಪಾದಿಸಿದರು.</p>.<p>‘ಮನೋಜ್ಞ ನಟನೆಯ ಮೂಲಕ ಮಾನವೀಯ ಮೌಲ್ಯಗಳ ಶ್ರೇಷ್ಠ ಚಿಂತನೆಗಳನ್ನು ವ್ಯಕ್ತಪಡಿಸುತ್ತಿದ್ದ ಡಾ. ರಾಜ್ಕುಮಾರ್ ತಮ್ಮ ಸರಳ ಜೀವನಶೈಲಿಯಿಂದ ಕನ್ನಡಿಗರು ಸೇರಿದಂತೆ ಎಲ್ಲ ಜನರಲ್ಲಿ ಬೆರೆತಿದ್ದಾರೆ. ಕನ್ನಡದ ಸ್ಪಷ್ಟ ಉಚ್ಚಾರಣೆ ಮೂಲಕ ಎಲ್ಲರಿಗೂ ಪ್ರೇರಣೆಯಾಗಿದ್ದಾರೆ. ಅವರು ಕರ್ನಾಟಕದ ಸಾಂಸ್ಕೃತಿಕ ಶಕ್ತಿಯಾಗಿದ್ದರು’ ಎಂದರು.</p>.<p>‘ರಾಜ್ಕುಮಾರ್ ನಮ್ಮ ಜಿಲ್ಲೆಯ ಹೆಮ್ಮೆ. ಕನ್ನಡದ ನಾಡು, ನುಡಿ, ನೆಲ, ಜಲ, ಭಾಷೆಯ ವಿಷಯದಲ್ಲಿ ಮುಂಚೂಣಿಯಲ್ಲಿರುತ್ತಿದ್ದ ಅವರು ಕನ್ನಡತನವನ್ನು ಎಂತಹುದೇ ಕ್ಲಿಷ್ಟ ಪರಿಸ್ಥಿತಿಯಲ್ಲೂ ಬಿಟ್ಟುಕೊಡುತ್ತಿರಲಿಲ್ಲ. ಅಂತಹ ಮಹಾನ್ ಚೇತನವನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ’ ಎಂದು ರವಿ ಅವರು ಹೇಳಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್. ಆನಂದ್ ಅವರು ಮಾತನಾಡಿದರು.</p>.<p>ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಎ. ರಮೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಚ್.ಕೆ.ಗಿರೀಶ್, ರಾಜ್ ಒಡನಾಡಿಗಳಲ್ಲಿ ಒಬ್ಬರಾಗಿದ್ದ ಜಯಸಿಂಹ, ಉಪನ್ಯಾಸಕ ಸುರೇಶ್ ಋಗ್ವೇದಿ, ಇತರರು ಇದ್ದರು.</p>.<p>ರಾಜ್ ಸಹೋದರಿಗೆ ಸನ್ಮಾನ:ರಾಜ್ಕುಮಾರ್ ಜನ್ಮದಿನದ ಅಂಗವಾಗಿ ನಗರ ಜನಾರ್ದನ ಪ್ರತಿಷ್ಠಾನದ ವತಿಯಿಂದ ಗಡಿಭಾಗದ ತಾಳವಾಡಿ ಸಮೀಪದ ಗಾಜನೂರಿನಲ್ಲಿ ಅವರ ಸಹೋದರಿ ನಾಗಮ್ಮ ಅವರನ್ನು ಸನ್ಮಾನಿಲಾಯಿತು.</p>.<p>ಪ್ರತಿಷ್ಠಾನದ ಅಧ್ಯಕ್ಷ ಅನಂತ ಪ್ರಸಾದ್, ನಾಗಮ್ಮ ಅವರ ಪುತ್ರ ಗೋಪಾಲ್, ಕುಟುಂಬದ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong>ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ವರನಟ ಡಾ.ರಾಜ್ಕುಮಾರ್ ಅವರ 92ನೇ ಜನ್ಮದಿನವನ್ನು ಶುಕ್ರವಾರ ಅತ್ಯಂತ ಸರಳವಾಗಿ ನಗರದಲ್ಲಿ ಆಚರಿಸಲಾಯಿತು. </p>.<p>ಡಾ.ರಾಜ್ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು, ‘ಪರಿಶ್ರಮ, ಶ್ರದ್ಧೆ, ಬದ್ಧತೆ ಹಾಗೂ ಕಾಯಕದಲ್ಲಿ ಅಸಾಮಾನ್ಯ ಸಾಧನೆ ಮಾಡಿದ ಡಾ. ರಾಜ್ಕುಮಾರ್ ಅವರು ಕನ್ನಡ ಸಂಸ್ಕೃತಿಯ ಅಸ್ಮಿತೆಯಾಗಿದ್ದಾರೆ’ ಎಂದು ಪ್ರತಿಪಾದಿಸಿದರು.</p>.<p>‘ಮನೋಜ್ಞ ನಟನೆಯ ಮೂಲಕ ಮಾನವೀಯ ಮೌಲ್ಯಗಳ ಶ್ರೇಷ್ಠ ಚಿಂತನೆಗಳನ್ನು ವ್ಯಕ್ತಪಡಿಸುತ್ತಿದ್ದ ಡಾ. ರಾಜ್ಕುಮಾರ್ ತಮ್ಮ ಸರಳ ಜೀವನಶೈಲಿಯಿಂದ ಕನ್ನಡಿಗರು ಸೇರಿದಂತೆ ಎಲ್ಲ ಜನರಲ್ಲಿ ಬೆರೆತಿದ್ದಾರೆ. ಕನ್ನಡದ ಸ್ಪಷ್ಟ ಉಚ್ಚಾರಣೆ ಮೂಲಕ ಎಲ್ಲರಿಗೂ ಪ್ರೇರಣೆಯಾಗಿದ್ದಾರೆ. ಅವರು ಕರ್ನಾಟಕದ ಸಾಂಸ್ಕೃತಿಕ ಶಕ್ತಿಯಾಗಿದ್ದರು’ ಎಂದರು.</p>.<p>‘ರಾಜ್ಕುಮಾರ್ ನಮ್ಮ ಜಿಲ್ಲೆಯ ಹೆಮ್ಮೆ. ಕನ್ನಡದ ನಾಡು, ನುಡಿ, ನೆಲ, ಜಲ, ಭಾಷೆಯ ವಿಷಯದಲ್ಲಿ ಮುಂಚೂಣಿಯಲ್ಲಿರುತ್ತಿದ್ದ ಅವರು ಕನ್ನಡತನವನ್ನು ಎಂತಹುದೇ ಕ್ಲಿಷ್ಟ ಪರಿಸ್ಥಿತಿಯಲ್ಲೂ ಬಿಟ್ಟುಕೊಡುತ್ತಿರಲಿಲ್ಲ. ಅಂತಹ ಮಹಾನ್ ಚೇತನವನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ’ ಎಂದು ರವಿ ಅವರು ಹೇಳಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್. ಆನಂದ್ ಅವರು ಮಾತನಾಡಿದರು.</p>.<p>ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಎ. ರಮೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಚ್.ಕೆ.ಗಿರೀಶ್, ರಾಜ್ ಒಡನಾಡಿಗಳಲ್ಲಿ ಒಬ್ಬರಾಗಿದ್ದ ಜಯಸಿಂಹ, ಉಪನ್ಯಾಸಕ ಸುರೇಶ್ ಋಗ್ವೇದಿ, ಇತರರು ಇದ್ದರು.</p>.<p>ರಾಜ್ ಸಹೋದರಿಗೆ ಸನ್ಮಾನ:ರಾಜ್ಕುಮಾರ್ ಜನ್ಮದಿನದ ಅಂಗವಾಗಿ ನಗರ ಜನಾರ್ದನ ಪ್ರತಿಷ್ಠಾನದ ವತಿಯಿಂದ ಗಡಿಭಾಗದ ತಾಳವಾಡಿ ಸಮೀಪದ ಗಾಜನೂರಿನಲ್ಲಿ ಅವರ ಸಹೋದರಿ ನಾಗಮ್ಮ ಅವರನ್ನು ಸನ್ಮಾನಿಲಾಯಿತು.</p>.<p>ಪ್ರತಿಷ್ಠಾನದ ಅಧ್ಯಕ್ಷ ಅನಂತ ಪ್ರಸಾದ್, ನಾಗಮ್ಮ ಅವರ ಪುತ್ರ ಗೋಪಾಲ್, ಕುಟುಂಬದ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>