ರಥೋತ್ಸವ ಹಿನ್ನೆಲೆಯಲ್ಲಿ ದೇವಾಲಯವನ್ನು ತಳಿರು, ತೋರಣ ಮತ್ತು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಮೇ.21ರಿಂದಲೇ ದೇವಾಲಯದಲ್ಲಿ ನಾಗರಾಜ ದೀಕ್ಷಿತ್ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಗಳು ಜರುಗಿದವು. ಗಣಪತಿ ಪೂಜೆ, ಶಿವಯಾಗ, ರಥ ಪ್ರತಿಷ್ಠೆ, ರಥ ವಾಸ್ತಬಲಿ, ನವಗ್ರಹ ಪೂಜೆ, ಮಂಟಪೋತ್ಸವ ನಡೆದವು. ಗುರುವಾರ ಬೆಳಿಗ್ಗೆಯಿಂದಲೇ ರಾಜ್ಯದ ನಾನಾ ಕಡೆಗಳಿಂದ ಮತ್ತು ತಾಲ್ಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತರು ಸರದಿ ಸಾಲಿನಲ್ಲಿ ನಿಂತು ಪೂಜೆ ಸಲ್ಲಿಸುವ ಮೂಲಕ ಭಕ್ತಿ ಮೆರೆದರು.