‘ಕೋವಿಡ್ ಎರಡನೇ ಅಲೆ ಇರುವುದರಿಂದ ಜನರಿಗೆ ಆಹಾರ ಸಮಸ್ಯೆ ಉಂಟಾಗಬಾರದು. ಆದಷ್ಟು ಜನಸಾಮಾನ್ಯರಿಗೆ ಸರ್ಕಾರದ ಅನ್ನಭಾಗ್ಯ ಯೋಜನೆಯ ಪಡಿತರ ಕಡ್ಡಾಯವಾಗಿ ತಲುಪಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ. ಅದರ ಆಧಾರದ ಮೇಲೆ ನಾವು ಸಾಕಷ್ಟು ಪ್ರಯತ್ನ ಮಾಡುತ್ತಿದ್ದೇವೆ ಆದರೆ, ನೆಟ್ ವರ್ಕ್ ಸಮಸ್ಯೆಯಿಂದಾಗಿ ಈ ತೊಂದರೆ ಎದುರಾಗಿದೆ. ಜಿಲ್ಲೆಯಾದ್ಯಂತ ಈ ಸಮಸ್ಯೆ ಇದೆ. ಈ ಬಗ್ಗೆ ಹಿರಿಯ ಅಧಿಕಾರಿಗಳಿಗೂ ಮಾಹಿತಿ ನೀಡಲಾಗಿದೆ’ ಎನ್ನುತ್ತಾರೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು.