ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘2019ರ ಚುನಾವಣೆಯಲ್ಲಿ ನಾನೂ ಟಿಕೆಟ್ ಬಯಸಿದ್ದೆ. ಪಕ್ಷ ಶ್ರೀನಿವಾಸ್ ಪ್ರಸಾದ್ ಅವರಿಗೆ ಟಿಕೆಟ್ ನೀಡಿತ್ತು. ನಾನು ಸೇರಿದಂತೆ ಎಲ್ಲ ಮುಖಂಡರು ಅವರ ಗೆಲುವಿಗೆ ಶ್ರಮಿಸಿದ್ದೆವು. ಮುಂದಿನ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ, ರಾಜಕೀಯ ನಿವೃತ್ತಿ ಪಡೆಯುವುದಾಗಿ ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ. ನಾನು ಇದೇ ಜಿಲ್ಲೆಗೆ ಸೇರಿದವನು. ನನ್ನ ತಾಯಿ, ಪತ್ನಿ ಈ ಜಿಲ್ಲೆಯವರು. ನಾನು 16 ವರ್ಷಗಳ ಕಾಲ ಮೈಸೂರು ಚಾಮರಾಜನಗರ ವ್ಯಾಪ್ತಿಯಲ್ಲಿ ಅರಣ್ಯ ಅಧಿಕಾರಿಯಾಗಿ ಕೆಲಸ ಮಾಡಿದ್ದೇನೆ. ಎಚ್.ಡಿ.ಕೋಟೆ ತಾಲ್ಲೂಕಿನ ಹಂಪಾಪುರದಲ್ಲಿ ಕೃಷಿ ಜಮೀನು ಹೊಂದಿದ್ದೇನೆ. ಹಾಗಾಗಿ ಈ ಕ್ಷೇತ್ರದ ಪೂರ್ಣ ಪರಿಚಯ ನನಗಿದೆ’ ಎಂದರು.