ಚಾಮರಾಜನಗರ: ಇಲ್ಲಿನ ನಗರಸಭೆಯ ವ್ಯಾಪ್ತಿಯ ಸಾರ್ವಜನಿಕರಿಗೆ ಇ–ಆಸ್ತಿ, ಇ-ಸ್ವತ್ತು, ಖಾತೆ, ಹಕ್ಕು ಬದಲಾವಣೆ ಮಾಡಿಕೊಡಲು ಎಂಟು ತಿಂಗಳುಗಳಿಂದ ವರ್ಷಕ್ಕೂ ಹೆಚ್ಚು ಕಾಲ ವಿಳಂಬ ಮಾಡಿ ಕರ್ತವ್ಯ ಲೋಪ ಎಸಗಿದ ಕಂದಾಯ ಅಧಿಕಾರಿ ಜಯಶೀಲ ಅವರನ್ನು ಸೇವೆಯಿಂದ ಅಮಾನತು ಮಾಡಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶ ಹೊರಡಿಸಿದ್ದಾರೆ.