ಚಾಮರಾಜನಗರ, ಕೊಳ್ಳೇಗಾಲ ತಾಲ್ಲೂಕಿನ ಒಂದು ಟಿಎಪಿಸಿಎಂಎಸ್ನಲ್ಲಿ, ಚಾಮರಾಜನಗರ, ಗುಂಡ್ಲುಪೇಟೆ ತಾಲ್ಲೂಕು ವ್ಯಾಪ್ತಿಯ ಐದು ಪಿಎಸಿಎಸ್ನಲ್ಲಿ, ಕೊಳ್ಳೇಗಾಲ, ಯಳಂದೂರು ಹಾಗೂ ಹನೂರು ತಾಲ್ಲೂಕಿನ ತಲಾ ಎರಡು ಪಿಎಸಿಎಸ್ನಲ್ಲಿ ಖರೀದಿ ಕೇಂದ್ರಗಳನ್ನು ತೆರೆದು ಭತ್ತ, ರಾಗಿಯನ್ನು ಖರೀದಿಸಲಾಗುತ್ತದೆ. ಚಾಮರಾಜನಗರ, ಯಳಂದೂರು, ಗುಂಡ್ಲುಪೇಟೆ, ಹನೂರು ತಾಲ್ಲೂಕಿನ ತಲಾ ಒಂದು ಲ್ಯಾಂಪ್ಸ್ ಸೊಸೈಟಿಯಲ್ಲೂ ಖರೀದಿ ಕೇಂದ್ರ ತೆರೆಯಲಾಗಿದೆ.