<p><strong>ಸಂತೇಮರಹಳ್ಳಿ:</strong> ಸಮೀಪದ ಯಲಕ್ಕೂರು ಗ್ರಾಮದಿಂದ ಕರಡಿಮೋಳೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಅಭಿವೃದ್ಧಿಪಡಿಸಬೇಕು ಎಂದು ಒತ್ತಾಯಿಸಿ ಯಲಕ್ಕೂರು ಗ್ರಾಮಸ್ಥರು ಈಚೆಗೆ ಪ್ರತಿಭಟನೆ ನಡೆಸಿದರು.</p>.<p>ಗ್ರಾಮಸ್ಥರು ಮುಖ್ಯ ರಸ್ತೆಯಲ್ಲಿ ಗುಂಡಿ ಬಿದ್ದಿರುವ ಸ್ಥಳದಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಧಿಕ್ಕಾರ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಕರಡಿಮೋಳೆ ಗ್ರಾಮದಿಂದ ಯಲಕ್ಕೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ 2 ಕಿ.ಮೀ ಮುಖ್ಯ ರಸ್ತೆಯನ್ನು ಮಾಜಿ ಶಾಸಕ ವಾಟಾಳ್ ನಾಗರಾಜು ಅವರ ಅಧಿಕಾರ ಅವಧಿಯಲ್ಲಿ ಅಭಿವೃದ್ಧಿ ಪಡಿಸಿ ಡಾಂಬರೀಕರಣ ಮಾಡಲಾಗಿತ್ತು. ಈಗ ಈ ರಸ್ತೆಯಲ್ಲಿ ಗುಂಡಿಗಳಾಗಿವೆ. ರಸ್ತೆ ಬದಿಯಲ್ಲಿ ಗಿಡಗಂಟಿಗಳು ಬೆಳೆದಿರುವ ಪರಿಣಾಮ ಸಾರ್ವಜನಿಕರು ಹಾಗೂ ವಾಹನಗಳು ರಸ್ತೆಯಲ್ಲಿ ಸಂಚಾರ ಮಾಡುವುದಕ್ಕೆ ತೊಂದರೆಯಾಗಿದೆ ಎಂದು ಆರೋಪಿಸಿದರು.</p>.<p>ಕಳೆದ 2 ವರ್ಷಗಳಿಂದ ರಸ್ತೆ ಹಾಳಾಗಿದ್ದು, ಗ್ರಾಮಕ್ಕೆ ಬರುತ್ತಿದ್ದ ಸಾರಿಗೆ ಹಾಗೂ ಖಾಸಗಿ ಬಸ್ಗಳು ಸ್ಥಗಿತವಾಗಿವೆ. ಈ ಹಿನ್ನೆಲೆಯಲ್ಲಿ ಗ್ರಾಮದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಚಾಮರಾಜನಗರ ಹಾಗೂ ಸಂತೇಮರಹಳ್ಳಿಗೆ ತೆರಳಬೇಕಾದರೇ ಕುದೇರು ಅಥವಾ ಯಡಿಯೂರು ಗ್ರಾಮದ ಮುಖ್ಯ ರಸ್ತೆಗೆ ತೆರಳಿ ಬಸ್ ಹತ್ತುವ ಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಗ್ರಾಮದ ಮುಖ್ಯ ರಸ್ತೆಯನ್ನು ಅಭಿವೃದ್ಧಿ ಪಡಿಸಬೇಕೆಂದು ಒತ್ತಾಯಿಸಿ ಕ್ಷೇತ್ರದ ಶಾಸಕರಿಗೆ ಹಲವಾರು ಬಾರಿ ಮನವಿ ನೀಡಿದರು ಪ್ರಯೋಜನವಾಗಿಲ್ಲ. ಕೂಡಲೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ಕ್ಷೇತ್ರದ ಶಾಸಕರು ಇತ್ತ ಗಮನಹರಿಸಿ ರಸ್ತೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.</p>.<p>ರಾಜೇಶ್, ಮಹದೇವಪ್ಪ, ಸಿದ್ದರಾಜು, ರಾಚಯ್ಯ, ಮಹೇಶ್, ಮಹದೇವಸ್ವಾಮಿ, ಚಂದ್ರಯ್ಯ, ಶ್ರೀಕಂಠಸ್ವಾಮಿ, ಪ್ರೀತಮ್, ರೇವಣ್ಣ, ರಂಗಸ್ವಾಮಿ, ಮಹದೇವಯ್ಯ, ಗಿರಿ, ಮಹೇಶ್, ಮಾದಯ್ಯ, ಮನೋಜ್, ಮಹದೇವಯ್ಯ ಪ್ರತಿಭಟನೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂತೇಮರಹಳ್ಳಿ:</strong> ಸಮೀಪದ ಯಲಕ್ಕೂರು ಗ್ರಾಮದಿಂದ ಕರಡಿಮೋಳೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಅಭಿವೃದ್ಧಿಪಡಿಸಬೇಕು ಎಂದು ಒತ್ತಾಯಿಸಿ ಯಲಕ್ಕೂರು ಗ್ರಾಮಸ್ಥರು ಈಚೆಗೆ ಪ್ರತಿಭಟನೆ ನಡೆಸಿದರು.</p>.<p>ಗ್ರಾಮಸ್ಥರು ಮುಖ್ಯ ರಸ್ತೆಯಲ್ಲಿ ಗುಂಡಿ ಬಿದ್ದಿರುವ ಸ್ಥಳದಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಧಿಕ್ಕಾರ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಕರಡಿಮೋಳೆ ಗ್ರಾಮದಿಂದ ಯಲಕ್ಕೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ 2 ಕಿ.ಮೀ ಮುಖ್ಯ ರಸ್ತೆಯನ್ನು ಮಾಜಿ ಶಾಸಕ ವಾಟಾಳ್ ನಾಗರಾಜು ಅವರ ಅಧಿಕಾರ ಅವಧಿಯಲ್ಲಿ ಅಭಿವೃದ್ಧಿ ಪಡಿಸಿ ಡಾಂಬರೀಕರಣ ಮಾಡಲಾಗಿತ್ತು. ಈಗ ಈ ರಸ್ತೆಯಲ್ಲಿ ಗುಂಡಿಗಳಾಗಿವೆ. ರಸ್ತೆ ಬದಿಯಲ್ಲಿ ಗಿಡಗಂಟಿಗಳು ಬೆಳೆದಿರುವ ಪರಿಣಾಮ ಸಾರ್ವಜನಿಕರು ಹಾಗೂ ವಾಹನಗಳು ರಸ್ತೆಯಲ್ಲಿ ಸಂಚಾರ ಮಾಡುವುದಕ್ಕೆ ತೊಂದರೆಯಾಗಿದೆ ಎಂದು ಆರೋಪಿಸಿದರು.</p>.<p>ಕಳೆದ 2 ವರ್ಷಗಳಿಂದ ರಸ್ತೆ ಹಾಳಾಗಿದ್ದು, ಗ್ರಾಮಕ್ಕೆ ಬರುತ್ತಿದ್ದ ಸಾರಿಗೆ ಹಾಗೂ ಖಾಸಗಿ ಬಸ್ಗಳು ಸ್ಥಗಿತವಾಗಿವೆ. ಈ ಹಿನ್ನೆಲೆಯಲ್ಲಿ ಗ್ರಾಮದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಚಾಮರಾಜನಗರ ಹಾಗೂ ಸಂತೇಮರಹಳ್ಳಿಗೆ ತೆರಳಬೇಕಾದರೇ ಕುದೇರು ಅಥವಾ ಯಡಿಯೂರು ಗ್ರಾಮದ ಮುಖ್ಯ ರಸ್ತೆಗೆ ತೆರಳಿ ಬಸ್ ಹತ್ತುವ ಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಗ್ರಾಮದ ಮುಖ್ಯ ರಸ್ತೆಯನ್ನು ಅಭಿವೃದ್ಧಿ ಪಡಿಸಬೇಕೆಂದು ಒತ್ತಾಯಿಸಿ ಕ್ಷೇತ್ರದ ಶಾಸಕರಿಗೆ ಹಲವಾರು ಬಾರಿ ಮನವಿ ನೀಡಿದರು ಪ್ರಯೋಜನವಾಗಿಲ್ಲ. ಕೂಡಲೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ಕ್ಷೇತ್ರದ ಶಾಸಕರು ಇತ್ತ ಗಮನಹರಿಸಿ ರಸ್ತೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.</p>.<p>ರಾಜೇಶ್, ಮಹದೇವಪ್ಪ, ಸಿದ್ದರಾಜು, ರಾಚಯ್ಯ, ಮಹೇಶ್, ಮಹದೇವಸ್ವಾಮಿ, ಚಂದ್ರಯ್ಯ, ಶ್ರೀಕಂಠಸ್ವಾಮಿ, ಪ್ರೀತಮ್, ರೇವಣ್ಣ, ರಂಗಸ್ವಾಮಿ, ಮಹದೇವಯ್ಯ, ಗಿರಿ, ಮಹೇಶ್, ಮಾದಯ್ಯ, ಮನೋಜ್, ಮಹದೇವಯ್ಯ ಪ್ರತಿಭಟನೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>