ವಾರ್ಡ್ನಲ್ಲಿ ಚರಂಡಿಗಳ ಎರಡು ಬದಿಯಲ್ಲೂ ಕಸದ ರಾಶಿ ತುಂಬಿದ್ದು, ದುರ್ವಾಸನೆ ಬೀರುತ್ತಿದೆ. ನಿವಾಸಿಗರಿಗೆ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ. ನಾಗರತ್ನಮ್ಮ ಬಡಾವಣೆಯಲ್ಲಿ ಕೆಲ ರಸ್ತೆಗಳು ಗುಂಡಿಬಿದ್ದಿದ್ದು, ದ್ವಿಚಕ್ರ ವಾಹನ ಸವಾರರು ಅಪಾಯಕಾರಿ ರಸ್ತೆಯಲ್ಲೇ ಸಂಚರಿಸಬೇಕಾಗಿದೆ. ಮಳೆ ಬಂದರೆ ನೀರು ನಿಂತು ಕೆರೆಯಂತೆ ಭಾಸವಾಗುತ್ತಿದೆ. ರಸ್ತೆಯ ಕೆಸರಿನಲ್ಲೇ ಓಡಾಡಬೇಕಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.