ಈ ಬಗ್ಗೆ ಪ್ರತಿಕ್ರಿಯಿಸಿದ ಲೋಕೋಪಯೋಗಿ ಇಲಾಖೆ ಮಹದೇಶ್ವರ ಬೆಟ್ಟ ಉಪ ವಿಭಾಗದ ಎಂಜಿನಿಯರ್ ತನೂಜ್ ಅವರು, ‘ಮಧುವನಹಳ್ಳಿಯಿಂದ ಹನೂರುವರೆಗೆ ಕೆ–ಶಿಪ್ ವತಿಯಿಂದ ರಸ್ತೆ ನಿರ್ವಹಣೆ ಮಾಡುತ್ತಿರುವುದರಿಂದ, ಅವರೇ ದುರಸ್ತಿಗೆ ಕ್ರಮ ಕೈಗೊಂಡಿದ್ದಾರೆ. ಹನೂರಿನಿಂದ ಕೌದಳ್ಳಿವರೆಗೆ ಡಿಸೆಂಬರ್ ಅಂತ್ಯದ ವೇಳೆಗೆ ಅಥವಾ ಜನವರಿಯಲ್ಲಿ ಎರಡನೇ ಹಂತದಲ್ಲಿ ರಸ್ತೆಯನ್ನು ನಿರ್ವಹಣೆ ಮಾಡಲಾಗುವುದು’ ಎಂದು ತಿಳಿಸಿದರು.