<p><strong>ಮಹದೇಶ್ವರ ಬೆಟ್ಟ</strong>: ಇಲ್ಲಿನ ದೀಪದಗಿರಿ ಒಡ್ಡುವಿನಲ್ಲಿ ನಿರ್ಮಾಣವಾಗಿರುವ 108 ಅಡಿ ಎತ್ತರದ ಮಹದೇಶ್ವರ ಸ್ವಾಮಿ ಪ್ರತಿಮೆ ಇರುವ ಪ್ರದೇಶದ ಸುತ್ತದ ಇಳಿಜಾರಿನಲ್ಲಿ ಕಲ್ಲಿನಿಂದ ನಿರ್ಮಿಸಲಾಗಿರುವ ತಡೆಗೋಡೆಯ ಒಂದು ಭಾಗ ಕುಸಿದಿದೆ. </p>.<p>ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ ಎಂದು ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಹೇಳಿದ್ದಾರೆ.</p>.<p>ಇದೇ 18ರಂದು ಪ್ರತಿಮೆ ಉದ್ಘಾಟನೆಯಾಗಲಿದ್ದು, ಕಾರ್ಯಕ್ರಮ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ. ಪ್ರತಿಮೆಯ ಮುಂಭಾಗದಲ್ಲಿ ಸುಮಾರು 30 ಅಡಿ ಸ್ಥಳವನ್ನು ಸಮತಟ್ಟುಗೊಳಿಸಲಾಗಿದೆ.</p>.<p>ಬೆಟ್ಟದ ತಳಭಾಗದಿಂದ ಮೇಲ್ಭಾಗದವರೆಗೂ ಕಲ್ಲುಕಟ್ಟೆ ನಿರ್ಮಾಣ ಮಾಡಲಾಗಿತ್ತು. ಸೋಮವಾರ ತಡರಾತ್ರಿ ಪ್ರತಿಮೆಯ ಬಲಭಾಗದ ಮೂಲೆಯಲ್ಲಿ ತಡೆಗೋಡೆ ಕುಸಿದಿದೆ. ಕಲ್ಲುಗಳು ಕೆಳಗೆ ಉರುಳಿ ಬಿದ್ದಿವೆ.</p>.<p>‘ನೀರುಣಿಸದೆ ಮಣ್ಣು ಸಮತಟ್ಟು ಮಾಡಿರುವುದರಿಂದ ಗೋಡೆ ಕುಸಿದಿದೆ. ಭದ್ರವಾದ ತಡೆಗೋಡೆ ನಿರ್ಮಿಸದಿದ್ದರೆ, ಮಳೆಗಾಲದಲ್ಲಿ ಕಷ್ಟವಾಗಲಿದೆ’ ಎಂದು ಸ್ಥಳೀಯರು ಹೇಳಿದ್ದಾರೆ. </p>.<p>‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಪ್ರಾಧಿಕಾರದ ಕಾರ್ಯದರ್ಶಿ ಎಸ್.ಕಾತ್ಯಾಯಿನಿ ದೇವಿ, ‘ಸೋಮವಾರ ರಾತ್ರಿ 9 ಗಂಟೆಯವರೆಗೂ ನಮ್ಮ ಸಿಬ್ಬಂದಿ ಅಲ್ಲಿ ಕೆಲಸ ಮಾಡುತ್ತಿದ್ದರು. ರಾತ್ರಿ 12–1 ಗಂಟೆ ಸುಮಾರಿಗೆ ಯಾರೋ ಉದ್ದೇಶಪೂರ್ವಕವಾಗಿ ತಡೆಗೋಡೆಗೆ ಹಾನಿ ಮಾಡಿರುವ ಶಂಕೆ ಇದೆ. ಶೀಘ್ರದಲ್ಲಿ ಅದು ಗೊತ್ತಾಗಲಿದೆ. ಪ್ರತಿಮೆ ಸ್ಥಳದಲ್ಲಿ ಭದ್ರತಾ ಸಿಬ್ಬಂದಿ ನಿಯೋಜಿಸಲಾಗುವುದು. ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹದೇಶ್ವರ ಬೆಟ್ಟ</strong>: ಇಲ್ಲಿನ ದೀಪದಗಿರಿ ಒಡ್ಡುವಿನಲ್ಲಿ ನಿರ್ಮಾಣವಾಗಿರುವ 108 ಅಡಿ ಎತ್ತರದ ಮಹದೇಶ್ವರ ಸ್ವಾಮಿ ಪ್ರತಿಮೆ ಇರುವ ಪ್ರದೇಶದ ಸುತ್ತದ ಇಳಿಜಾರಿನಲ್ಲಿ ಕಲ್ಲಿನಿಂದ ನಿರ್ಮಿಸಲಾಗಿರುವ ತಡೆಗೋಡೆಯ ಒಂದು ಭಾಗ ಕುಸಿದಿದೆ. </p>.<p>ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ ಎಂದು ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಹೇಳಿದ್ದಾರೆ.</p>.<p>ಇದೇ 18ರಂದು ಪ್ರತಿಮೆ ಉದ್ಘಾಟನೆಯಾಗಲಿದ್ದು, ಕಾರ್ಯಕ್ರಮ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ. ಪ್ರತಿಮೆಯ ಮುಂಭಾಗದಲ್ಲಿ ಸುಮಾರು 30 ಅಡಿ ಸ್ಥಳವನ್ನು ಸಮತಟ್ಟುಗೊಳಿಸಲಾಗಿದೆ.</p>.<p>ಬೆಟ್ಟದ ತಳಭಾಗದಿಂದ ಮೇಲ್ಭಾಗದವರೆಗೂ ಕಲ್ಲುಕಟ್ಟೆ ನಿರ್ಮಾಣ ಮಾಡಲಾಗಿತ್ತು. ಸೋಮವಾರ ತಡರಾತ್ರಿ ಪ್ರತಿಮೆಯ ಬಲಭಾಗದ ಮೂಲೆಯಲ್ಲಿ ತಡೆಗೋಡೆ ಕುಸಿದಿದೆ. ಕಲ್ಲುಗಳು ಕೆಳಗೆ ಉರುಳಿ ಬಿದ್ದಿವೆ.</p>.<p>‘ನೀರುಣಿಸದೆ ಮಣ್ಣು ಸಮತಟ್ಟು ಮಾಡಿರುವುದರಿಂದ ಗೋಡೆ ಕುಸಿದಿದೆ. ಭದ್ರವಾದ ತಡೆಗೋಡೆ ನಿರ್ಮಿಸದಿದ್ದರೆ, ಮಳೆಗಾಲದಲ್ಲಿ ಕಷ್ಟವಾಗಲಿದೆ’ ಎಂದು ಸ್ಥಳೀಯರು ಹೇಳಿದ್ದಾರೆ. </p>.<p>‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಪ್ರಾಧಿಕಾರದ ಕಾರ್ಯದರ್ಶಿ ಎಸ್.ಕಾತ್ಯಾಯಿನಿ ದೇವಿ, ‘ಸೋಮವಾರ ರಾತ್ರಿ 9 ಗಂಟೆಯವರೆಗೂ ನಮ್ಮ ಸಿಬ್ಬಂದಿ ಅಲ್ಲಿ ಕೆಲಸ ಮಾಡುತ್ತಿದ್ದರು. ರಾತ್ರಿ 12–1 ಗಂಟೆ ಸುಮಾರಿಗೆ ಯಾರೋ ಉದ್ದೇಶಪೂರ್ವಕವಾಗಿ ತಡೆಗೋಡೆಗೆ ಹಾನಿ ಮಾಡಿರುವ ಶಂಕೆ ಇದೆ. ಶೀಘ್ರದಲ್ಲಿ ಅದು ಗೊತ್ತಾಗಲಿದೆ. ಪ್ರತಿಮೆ ಸ್ಥಳದಲ್ಲಿ ಭದ್ರತಾ ಸಿಬ್ಬಂದಿ ನಿಯೋಜಿಸಲಾಗುವುದು. ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>