‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಪ್ರಾಧಿಕಾರದ ಕಾರ್ಯದರ್ಶಿ ಎಸ್.ಕಾತ್ಯಾಯಿನಿ ದೇವಿ, ‘ಸೋಮವಾರ ರಾತ್ರಿ 9 ಗಂಟೆಯವರೆಗೂ ನಮ್ಮ ಸಿಬ್ಬಂದಿ ಅಲ್ಲಿ ಕೆಲಸ ಮಾಡುತ್ತಿದ್ದರು. ರಾತ್ರಿ 12–1 ಗಂಟೆ ಸುಮಾರಿಗೆ ಯಾರೋ ಉದ್ದೇಶಪೂರ್ವಕವಾಗಿ ತಡೆಗೋಡೆಗೆ ಹಾನಿ ಮಾಡಿರುವ ಶಂಕೆ ಇದೆ. ಶೀಘ್ರದಲ್ಲಿ ಅದು ಗೊತ್ತಾಗಲಿದೆ. ಪ್ರತಿಮೆ ಸ್ಥಳದಲ್ಲಿ ಭದ್ರತಾ ಸಿಬ್ಬಂದಿ ನಿಯೋಜಿಸಲಾಗುವುದು. ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುವುದು’ ಎಂದರು.