ಉಡಿಗಾಲದ ಚಿಕ್ಕ ಮೋರಿ ಮೂಲಕ ಗುರುತ್ವಾಕರ್ಷಣೆ ಶಕ್ತಿಯಲ್ಲಿ ನೀರು ಹರಿಸಬೇಕು ಎಂದು ರೈತ ಮುಖಂಡರು, ಗ್ರಾಮಸ್ಥರು ಪಟ್ಟುಹಿಡಿದಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರಿಗೆ ಮನವಿಯನ್ನೂ ಸಲ್ಲಿಸಿದ್ದರು. ಸೋಮಣ್ಣ ಅವರು ಕಾವೇರಿ ನೀರಾವರಿ ನಿಗಮ, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಯೋಜನೆ ರೂಪಿಸಲು ಸೂಚನೆ ನೀಡಿದ್ದರು.