‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯ ಸಾರಾ ಥಾಮಸ್ ಅವರು, ‘ಆರೋಪಿಗಳ ಪತ್ತೆಗಾಗಿ ನಾಲ್ಕು ತಂಡಗಳನ್ನು ಮಾಡಲಾಗಿದೆ. ಮಾದಕ ದ್ರವ್ಯ ನಿಗ್ರಹ ಅಧಿಕಾರಿಗಳು ಎಂದು ಹೇಳಿಕೊಂಡು ವಾಹನ ತಪಾಸಣೆ ಮಾಡುವ ನೆಪದಲ್ಲಿ ದುಡ್ಡು ಕೊಳ್ಳೆ ಹೊಡೆದಿದ್ದಾರೆ ಎಂದು ವ್ಯಾಪಾರಿ ದೂರಿನಲ್ಲಿ ಹೇಳಿದ್ದಾರೆ.ವಾಹನದಲ್ಲಿ ಅವರೊಬ್ಬರೇ ಇದ್ದರು. ಅವರ ಬಗ್ಗೆಯೂ ನಮಗೆ ಅನುಮಾನ ಇದೆ. ಅಷ್ಟು ಹಣ ಎಲ್ಲಿಂದ ಬಂತು? ದೊಡ್ಡ ಮೊತ್ತವನ್ನು ತೆಗೆದುಕೊಂಡು ಹೋಗುತ್ತಿದ್ದುದು ಯಾಕೆ ಎಂಬುದನ್ನು ಅವರು ಸರಿಯಾಗಿ ವಿವರಿಸಿಲ್ಲ. ಹಣಕ್ಕೆ ಸಂಬಂಧಿಸಿದ ದಾಖಲೆಗಳನ್ನೂ ಅವರು ಸಲ್ಲಿಸಿಲ್ಲ. ಹಾಗಾಗಿ, ಎಲ್ಲ ಆಯಾಮಗಳಿಂದಲೂ ನಾವು ತನಿಖೆ ನಡೆಸುತ್ತಿದ್ದೇವೆ’ ಎಂದು ಹೇಳಿದರು.