ಮಹದೇಶ್ವರ ಬೆಟ್ಟ: ಇಲ್ಲಿನ ಪ್ರಸಿದ್ಧ ಯಾತ್ರಾಸ್ಥಳ ಮಲೆ ಮಹದೇಶ್ವರ ಸ್ವಾಮಿ ದೇವಾಲಯದ ಹುಂಡಿ ಹಣ ಎಣಿಕೆ ಕಾರ್ಯ ಗುರುವಾರ ನಡೆದಿದ್ದು, ₹2.62 ಕೋಟಿ ನಗದು ಸಂಗ್ರಹವಾಗಿದೆ.
71 ದಿನಗಳ ಬಳಿಕ ಹುಂಡಿ ಎಣಿಕೆ ಕಾರ್ಯ ನಡೆದಿದೆ. ಈ ಪೈಕಿ 14 ದಿನಗಳು ಕೋವಿಡ್ ಕಾರಣಕ್ಕೆ ದೇವಾಲಯಕ್ಕೆ ಭಕ್ತರ ಪ್ರವೇಶ ಇಲ್ಲದೇ ಇದ್ದುದರಿಂದ 57 ದಿನಗಳ ಅವಧಿಯಲ್ಲಿ ಭಕ್ತರು ₹2,62,76,718 ಹಣವನ್ನು ಕಾಣಿಕೆ ರೂಪದಲ್ಲಿ ಮಾದಪ್ಪನ ಹುಂಡಿಗೆ ಹಾಕಿದ್ದಾರೆ.
ನಗದು ಮಾತ್ರವಲ್ಲದೇ 170 ಗ್ರಾಂ ಚಿನ್ನ ಹಾಗೂ 3.7 ಕೆಜಿ ಬೆಳ್ಳಿಯನ್ನೂ ಕಾಣಿಕೆ ರೂಪದಲ್ಲಿ ಭಕ್ತರು ಅರ್ಪಿಸಿದ್ದಾರೆ.
ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದಲ್ಲಿರುವ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಸಮ್ಮುಖದಲ್ಲಿ, ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ಬೆಳಿಗ್ಗೆ 7.30ಕ್ಕೆ ಆರಂಭವಾದ ಹುಂಡಿ ಎಣಿಕೆ ಕಾರ್ಯ ರಾತ್ರಿ 11.30ರವರೆಗೂ ನಡೆಯಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.