<p><strong>ಗುಂಡ್ಲುಪೇಟೆ:</strong> ಗ್ರಾಮೀಣಾಭಿವೃದ್ಧಿ ವಿಷಯದಲ್ಲಿ ಧರ್ಮಸ್ಥಳ ಸಂಸ್ಥೆ ಮಾದರಿ ಕಾರ್ಯ ಮಾಡುತ್ತಿದೆ ಎಂದು ಶಾಸಕ ಎಚ್.ಎಂ.ಗಣೇಶಪ್ರಸಾದ್ ಶ್ಲಾಘಿಸಿದರು.</p>.<p>ಪಟ್ಟಣದ ಗುರುಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಗಾಂಧಿ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿಸ್ಮೃತಿ, ಬೃಹತ್ ಜನಜಾಗೃತಿ ಜಾಥಾ ಮತ್ತು ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.</p>.<p>ಮಹಿಳಾ ಸ್ವಾವಲಂಬನೆ ಸೇರಿ ಸಮಾಜದ ಏಳಿಗೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಕೊಡುಗೆ ಅಪಾರ. ಕೆರೆಗಳ ಪುನಶ್ಚೇತನ, ನಿರ್ಗತಿಕರಿಗೆ ಮಾಸಾಶನ, ವಾತ್ಸಲ್ಯ ಮನೆ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಸೇರಿದಂತೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿರುವುದು ಉತ್ತಮ ವಿಚಾರ. ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ತಾಲ್ಲೂಕಿನಲ್ಲಿ ಹಲವಾರು ಪುರಾತನ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಅನುದಾನ ನೀಡಿದ್ದಾರೆ ಎಂದು ತಿಳಿಸಿದರು.</p>.<p>ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್ಕುಮಾರ್ ಮಾತನಾಡಿ, ಮಹಾತ್ಮ ಗಾಂಧೀಜಿ ಅಹಿಂಸಾ ಮಾರ್ಗದಿಂದ ಸ್ವಾತಂತ್ರ್ಯ ದೊರಕಿಸಿಕೊಡುವ ಜೊತೆಗೆ ಉತ್ತಮ ಸಮಾಜ ನಿರ್ಮಾಣಕ್ಕೆ ಶ್ರಮಿಸುವ ಮಹಾತ್ಮ ಎನಿಸಿಕೊಂಡರು. ಆದ್ದರಿಂದ ಅವರ ಆದರ್ಶ ತತ್ವಗಳು ಸಮಾಜಕ್ಕೆ ಅಗತ್ಯ. ದುಶ್ಚಟ ಮುಕ್ತ ಸಮಾಜ ಗಾಂಧಿಯವರ ಕನಸಾಗಿದ್ದು, ಇದಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆ ಶ್ರಮಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಅನೇಕ ಕುಟುಂಬಗಳಲ್ಲಿ ಮದ್ಯ ವ್ಯಸನಿಗಳಿದ್ದು ಅವರನ್ನು ಮದ್ಯ ವ್ಯಸನ ಮುಕ್ತ ಮಾಡಬೇಕು ಎಂದು ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆ ರಾಜ್ಯದಲ್ಲಿ ಸುಮಾರು ಎರಡು ಸಾವಿರ ಶಿಬಿರಗಳನ್ನು ನಡೆಸಿರುವುದು ಸಾಮಾನ್ಯದ ವಿಷಯವಲ್ಲ. ತಾಲ್ಲೂಕಿನಲ್ಲಿ ಸಾವಿರಾರು ಮಹಿಳಾ ಸ್ವ-ಸಹಾಯ ಸಂಘಗಳನ್ನು ಸ್ಥಾಪಿಸಿ ಅವರಿಗೆ ನೈತಿಕ ಸ್ಥೈರ್ಯ ಮತ್ತು ಧೈರ್ಯ ತುಂಬಿರುವುದು ಶ್ಲಾಘನೀಯ ಕಾರ್ಯ ಎಂದು ಹೇಳಿದರು.</p>.<p>ಪುರಸಭಾ ಅಧ್ಯಕ್ಷ ಶಶಿಧರ್ ಪಿ.ದೀಪು ಮಾತನಾಡಿದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯಿಂದ ನಿರ್ಗತಿಕರಿಗೆ ಮಾಸಾಶನ ಆದೇಶ ಪತ್ರ ಹಾಗೂ ವಾತ್ಸಲ್ಯ ಮನೆ ನಿರ್ಮಾಣದ ಪತ್ರ ನೀಡಲಾಯಿತು.</p>.<p>ಮೂಡುಗೂರು ಇಮ್ಮಡಿ ಉದ್ದಾನ ಸ್ವಾಮೀಜಿ ಆರ್ಶೀವಚನ ನೀಡಿದರು. ಪುರಸಭಾ ಉಪಾಧ್ಯಕ್ಷ ಶ್ರೀನಿವಾಸ ಕಣ್ಣಪ್ಪ, ಪುರಸಭಾ ಸದಸ್ಯ ನಾಗೇಶ್, ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಎಂ.ಎಸ್.ರವಿಶಂಕರ್, ನಿಯೋಜಿತ ಅಧ್ಯಕ್ಷ ಹೂರದಹಳ್ಳಿ ಪ್ರಸಾದ್, ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಸದಸ್ಯರಾದ ಬಿ.ಕುಮಾರಸ್ವಾಮಿ, ಹನೂರು ರಾಜಣ್ಣ, ಮಹದೇವಸ್ವಾಮಿ (ಎನ್ರಿಚ್), ಶ್ರೀನಿವಾಸತಿವಾರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ದಿನೇಶ್, ತಾಲೂಕು ಯೋಜನಾಧಿಕಾರಿ ಚಂದ್ರಶೇಖರ್ ಸೇರಿದಂತೆ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ:</strong> ಗ್ರಾಮೀಣಾಭಿವೃದ್ಧಿ ವಿಷಯದಲ್ಲಿ ಧರ್ಮಸ್ಥಳ ಸಂಸ್ಥೆ ಮಾದರಿ ಕಾರ್ಯ ಮಾಡುತ್ತಿದೆ ಎಂದು ಶಾಸಕ ಎಚ್.ಎಂ.ಗಣೇಶಪ್ರಸಾದ್ ಶ್ಲಾಘಿಸಿದರು.</p>.<p>ಪಟ್ಟಣದ ಗುರುಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಗಾಂಧಿ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿಸ್ಮೃತಿ, ಬೃಹತ್ ಜನಜಾಗೃತಿ ಜಾಥಾ ಮತ್ತು ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.</p>.<p>ಮಹಿಳಾ ಸ್ವಾವಲಂಬನೆ ಸೇರಿ ಸಮಾಜದ ಏಳಿಗೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಕೊಡುಗೆ ಅಪಾರ. ಕೆರೆಗಳ ಪುನಶ್ಚೇತನ, ನಿರ್ಗತಿಕರಿಗೆ ಮಾಸಾಶನ, ವಾತ್ಸಲ್ಯ ಮನೆ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಸೇರಿದಂತೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿರುವುದು ಉತ್ತಮ ವಿಚಾರ. ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ತಾಲ್ಲೂಕಿನಲ್ಲಿ ಹಲವಾರು ಪುರಾತನ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಅನುದಾನ ನೀಡಿದ್ದಾರೆ ಎಂದು ತಿಳಿಸಿದರು.</p>.<p>ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್ಕುಮಾರ್ ಮಾತನಾಡಿ, ಮಹಾತ್ಮ ಗಾಂಧೀಜಿ ಅಹಿಂಸಾ ಮಾರ್ಗದಿಂದ ಸ್ವಾತಂತ್ರ್ಯ ದೊರಕಿಸಿಕೊಡುವ ಜೊತೆಗೆ ಉತ್ತಮ ಸಮಾಜ ನಿರ್ಮಾಣಕ್ಕೆ ಶ್ರಮಿಸುವ ಮಹಾತ್ಮ ಎನಿಸಿಕೊಂಡರು. ಆದ್ದರಿಂದ ಅವರ ಆದರ್ಶ ತತ್ವಗಳು ಸಮಾಜಕ್ಕೆ ಅಗತ್ಯ. ದುಶ್ಚಟ ಮುಕ್ತ ಸಮಾಜ ಗಾಂಧಿಯವರ ಕನಸಾಗಿದ್ದು, ಇದಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆ ಶ್ರಮಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಅನೇಕ ಕುಟುಂಬಗಳಲ್ಲಿ ಮದ್ಯ ವ್ಯಸನಿಗಳಿದ್ದು ಅವರನ್ನು ಮದ್ಯ ವ್ಯಸನ ಮುಕ್ತ ಮಾಡಬೇಕು ಎಂದು ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆ ರಾಜ್ಯದಲ್ಲಿ ಸುಮಾರು ಎರಡು ಸಾವಿರ ಶಿಬಿರಗಳನ್ನು ನಡೆಸಿರುವುದು ಸಾಮಾನ್ಯದ ವಿಷಯವಲ್ಲ. ತಾಲ್ಲೂಕಿನಲ್ಲಿ ಸಾವಿರಾರು ಮಹಿಳಾ ಸ್ವ-ಸಹಾಯ ಸಂಘಗಳನ್ನು ಸ್ಥಾಪಿಸಿ ಅವರಿಗೆ ನೈತಿಕ ಸ್ಥೈರ್ಯ ಮತ್ತು ಧೈರ್ಯ ತುಂಬಿರುವುದು ಶ್ಲಾಘನೀಯ ಕಾರ್ಯ ಎಂದು ಹೇಳಿದರು.</p>.<p>ಪುರಸಭಾ ಅಧ್ಯಕ್ಷ ಶಶಿಧರ್ ಪಿ.ದೀಪು ಮಾತನಾಡಿದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯಿಂದ ನಿರ್ಗತಿಕರಿಗೆ ಮಾಸಾಶನ ಆದೇಶ ಪತ್ರ ಹಾಗೂ ವಾತ್ಸಲ್ಯ ಮನೆ ನಿರ್ಮಾಣದ ಪತ್ರ ನೀಡಲಾಯಿತು.</p>.<p>ಮೂಡುಗೂರು ಇಮ್ಮಡಿ ಉದ್ದಾನ ಸ್ವಾಮೀಜಿ ಆರ್ಶೀವಚನ ನೀಡಿದರು. ಪುರಸಭಾ ಉಪಾಧ್ಯಕ್ಷ ಶ್ರೀನಿವಾಸ ಕಣ್ಣಪ್ಪ, ಪುರಸಭಾ ಸದಸ್ಯ ನಾಗೇಶ್, ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಎಂ.ಎಸ್.ರವಿಶಂಕರ್, ನಿಯೋಜಿತ ಅಧ್ಯಕ್ಷ ಹೂರದಹಳ್ಳಿ ಪ್ರಸಾದ್, ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಸದಸ್ಯರಾದ ಬಿ.ಕುಮಾರಸ್ವಾಮಿ, ಹನೂರು ರಾಜಣ್ಣ, ಮಹದೇವಸ್ವಾಮಿ (ಎನ್ರಿಚ್), ಶ್ರೀನಿವಾಸತಿವಾರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ದಿನೇಶ್, ತಾಲೂಕು ಯೋಜನಾಧಿಕಾರಿ ಚಂದ್ರಶೇಖರ್ ಸೇರಿದಂತೆ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>