<p>ಪ್ರಜಾವಾಣಿ ವಾರ್ತೆ</p>.<p><strong>ಯಳಂದೂರು</strong>: ‘ಗ್ರಾಮೀಣ ರಸ್ತೆಗಳನ್ನು ಸರ್ವ ಋತು ರಸ್ತೆಗಳನ್ನಾಗಿ ರೂಪಿಸಲು ಆದ್ಯತೆ ನೀಡಲಾಗುವುದು’ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಹೇಳಿದರು.</p>.<p>ತಾಲ್ಲೂಕಿನ ಕಿನಕಹಳ್ಳಿ - ಕುಂತೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಕೃಷಿ ಚಟುವಟಿಕೆಗಳು ಹೆಚ್ಚಾಗುತ್ತವೆ. ರೈತರು ಆರ್ಥಿಕ ಹಿಡುವಳಿಗೆ ಸಹಾಯಕವಾಗಲಿದೆ. ಟೆಂಡರ್ ಮೂಲಕ ಕಾಮಗಾರಿ ನಡೆಸಬೇಕಿದ್ದು, ಆದ್ಯತೆ ಮೇರೆಗೆ 3 ತಾಲ್ಲೂಕುಗಳಿಗೂ ನೆರವು ನೀಡಲಾಗುವುದು’ ಎಂದರು.</p>.<p>ಮುಖಂಡರಾದ ಕಿನಕಹಳ್ಳಿ ಪ್ರಭುಪ್ರಸಾದ್, ಸಿದ್ದರಾಜು, ಕಮಲ್ ನಾಗರಾಜು, ಗ್ರಾಪಂ ಅಧ್ಯಕ್ಷರಾದ ಗಂಗಾಂಬಿಕೆ, ವೆಂಕಟಾಚಲ, ತೋಟೇಶ್ ಹಾಗೂ ಇತರರು ಇದ್ದರು.</p>.<p>ಯರಗಂಬಳ್ಳಿ ಗ್ರಾಮದ ಪರಿಶಿಷ್ಟರ ಬೀದಿ ಮುಂಭಾಗ ಡಾ.ಅಂಬೇಡ್ಕರ್ ಅವರ ಪ್ರತಿಮೆ ಹಾಗೂ ಮಂಟೇಸ್ವಾಮಿ ಸಮುದಾಯ ಭವನ ನಿರ್ಮಾಣ ಮಾಡಲು ಶಾಸಕ ಎ. ಆರ್. ಕೃಷ್ಣಮೂರ್ತಿ ಗುದ್ದಲಿ ಪೂಜೆ ನೆರವೇರಿಸಿದರು.</p>.<p>ಗ್ರಾ.ಪಂ. ಅಧ್ಯಕ್ಷೆ ಶೋಭಾ, ಸದಸ್ಯರಾದ ಮಹೇಶ್, ಸಿದ್ದರಾಜು, ಮಲ್ಲು, ಮಹಾದೇವಯ್ಯ, ಮುಖಂಡರಾದ ನಂಜುಂಡಸ್ವಾಮಿ ಹಾಗೂ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p><strong>ಯಳಂದೂರು</strong>: ‘ಗ್ರಾಮೀಣ ರಸ್ತೆಗಳನ್ನು ಸರ್ವ ಋತು ರಸ್ತೆಗಳನ್ನಾಗಿ ರೂಪಿಸಲು ಆದ್ಯತೆ ನೀಡಲಾಗುವುದು’ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಹೇಳಿದರು.</p>.<p>ತಾಲ್ಲೂಕಿನ ಕಿನಕಹಳ್ಳಿ - ಕುಂತೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಕೃಷಿ ಚಟುವಟಿಕೆಗಳು ಹೆಚ್ಚಾಗುತ್ತವೆ. ರೈತರು ಆರ್ಥಿಕ ಹಿಡುವಳಿಗೆ ಸಹಾಯಕವಾಗಲಿದೆ. ಟೆಂಡರ್ ಮೂಲಕ ಕಾಮಗಾರಿ ನಡೆಸಬೇಕಿದ್ದು, ಆದ್ಯತೆ ಮೇರೆಗೆ 3 ತಾಲ್ಲೂಕುಗಳಿಗೂ ನೆರವು ನೀಡಲಾಗುವುದು’ ಎಂದರು.</p>.<p>ಮುಖಂಡರಾದ ಕಿನಕಹಳ್ಳಿ ಪ್ರಭುಪ್ರಸಾದ್, ಸಿದ್ದರಾಜು, ಕಮಲ್ ನಾಗರಾಜು, ಗ್ರಾಪಂ ಅಧ್ಯಕ್ಷರಾದ ಗಂಗಾಂಬಿಕೆ, ವೆಂಕಟಾಚಲ, ತೋಟೇಶ್ ಹಾಗೂ ಇತರರು ಇದ್ದರು.</p>.<p>ಯರಗಂಬಳ್ಳಿ ಗ್ರಾಮದ ಪರಿಶಿಷ್ಟರ ಬೀದಿ ಮುಂಭಾಗ ಡಾ.ಅಂಬೇಡ್ಕರ್ ಅವರ ಪ್ರತಿಮೆ ಹಾಗೂ ಮಂಟೇಸ್ವಾಮಿ ಸಮುದಾಯ ಭವನ ನಿರ್ಮಾಣ ಮಾಡಲು ಶಾಸಕ ಎ. ಆರ್. ಕೃಷ್ಣಮೂರ್ತಿ ಗುದ್ದಲಿ ಪೂಜೆ ನೆರವೇರಿಸಿದರು.</p>.<p>ಗ್ರಾ.ಪಂ. ಅಧ್ಯಕ್ಷೆ ಶೋಭಾ, ಸದಸ್ಯರಾದ ಮಹೇಶ್, ಸಿದ್ದರಾಜು, ಮಲ್ಲು, ಮಹಾದೇವಯ್ಯ, ಮುಖಂಡರಾದ ನಂಜುಂಡಸ್ವಾಮಿ ಹಾಗೂ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>