<p><strong>ಚಾಮರಾಜನಗರ:</strong> ಜಿಲ್ಲೆಯಾದ್ಯಂತ ಬುಧವಾರ ಭಕ್ತಿ ಭಾವ, ಸಡಗರಗಳಿಂದ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಯಿತು. ಎಳ್ಳು– ಬೆಲ್ಲ, ಕಬ್ಬಿನ ಸವಿ, ಸುಗ್ಗಿ ಹಬ್ಬದ ಸಂಭ್ರಮವನ್ನು ಇನ್ನಷ್ಟು ಹೆಚ್ಚಿಸಿದವು.</p>.<p>ಹೊಸ ವರ್ಷದ ಮೊದಲ ಹಬ್ಬದ ಅಂಗವಾಗಿ ಜಿಲ್ಲೆಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು ನಡೆದವು. ಜನರು ಕೂಡ ಕುಟುಂಬ ಸಮೇತರಾಗಿ ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.</p>.<p>ಜನರುಎಳ್ಳು ಬೆಲ್ಲವನ್ನು ಸ್ನೇಹಿತರು, ನೆಂಟರಿಷ್ಟರಿಗೆ ಹಂಚಿ ಸಂಭ್ರಮಿಸಿದರು. ಮನೆಗಳಲ್ಲಿ ಪೊಂಗಲ್ ಸೇರಿದಂತೆ ವಿಶೇಷ ಅಡುಗೆ ಸಿದ್ಧಪಡಿಸಿ ಬಂಧುಗಳನ್ನು ಆಹ್ವಾನಿಸಿ ಬಡಿಸಿದರು. ತಮಿಳು ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳಲ್ಲಿ ಹಬ್ಬ ಆಚರಣೆ ಜೋರಾಗಿತ್ತು.</p>.<p><strong>ಗೋವುಗಳಿಗೆ ಪೂಜೆ:</strong> ನಗರ ಪ್ರದೇಶಗಳಲ್ಲಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಜನರು ಹಸುಗಳಿಗೆ ಪೂಜೆ ಸಲ್ಲಿಸಿದರು.</p>.<p>ಗ್ರಾಮೀಣ ಪ್ರದೇಶಗಳಲ್ಲಿ ರೈತರು ಹೊಸ ಫಸಲುಗಳಿಗೆ ಪೂಜೆ ಸಲ್ಲಿಸುವುದರ ಮೂಲಕ ಸಂಕ್ರಾಂತಿಯನ್ನು ವಿಶಿಷ್ಟವಾಗಿ ಆಚರಿಸಿದರು. ಹಬ್ಬದ ಅಂಗವಾಗಿ, ಸಂಜೆ ಹೊತ್ತು ಎತ್ತುಗಳನ್ನು ಕಿಚ್ಚು ಹಾಯಿಸಿ ಸಂಭ್ರಮಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಜಿಲ್ಲೆಯಾದ್ಯಂತ ಬುಧವಾರ ಭಕ್ತಿ ಭಾವ, ಸಡಗರಗಳಿಂದ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಯಿತು. ಎಳ್ಳು– ಬೆಲ್ಲ, ಕಬ್ಬಿನ ಸವಿ, ಸುಗ್ಗಿ ಹಬ್ಬದ ಸಂಭ್ರಮವನ್ನು ಇನ್ನಷ್ಟು ಹೆಚ್ಚಿಸಿದವು.</p>.<p>ಹೊಸ ವರ್ಷದ ಮೊದಲ ಹಬ್ಬದ ಅಂಗವಾಗಿ ಜಿಲ್ಲೆಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು ನಡೆದವು. ಜನರು ಕೂಡ ಕುಟುಂಬ ಸಮೇತರಾಗಿ ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.</p>.<p>ಜನರುಎಳ್ಳು ಬೆಲ್ಲವನ್ನು ಸ್ನೇಹಿತರು, ನೆಂಟರಿಷ್ಟರಿಗೆ ಹಂಚಿ ಸಂಭ್ರಮಿಸಿದರು. ಮನೆಗಳಲ್ಲಿ ಪೊಂಗಲ್ ಸೇರಿದಂತೆ ವಿಶೇಷ ಅಡುಗೆ ಸಿದ್ಧಪಡಿಸಿ ಬಂಧುಗಳನ್ನು ಆಹ್ವಾನಿಸಿ ಬಡಿಸಿದರು. ತಮಿಳು ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳಲ್ಲಿ ಹಬ್ಬ ಆಚರಣೆ ಜೋರಾಗಿತ್ತು.</p>.<p><strong>ಗೋವುಗಳಿಗೆ ಪೂಜೆ:</strong> ನಗರ ಪ್ರದೇಶಗಳಲ್ಲಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಜನರು ಹಸುಗಳಿಗೆ ಪೂಜೆ ಸಲ್ಲಿಸಿದರು.</p>.<p>ಗ್ರಾಮೀಣ ಪ್ರದೇಶಗಳಲ್ಲಿ ರೈತರು ಹೊಸ ಫಸಲುಗಳಿಗೆ ಪೂಜೆ ಸಲ್ಲಿಸುವುದರ ಮೂಲಕ ಸಂಕ್ರಾಂತಿಯನ್ನು ವಿಶಿಷ್ಟವಾಗಿ ಆಚರಿಸಿದರು. ಹಬ್ಬದ ಅಂಗವಾಗಿ, ಸಂಜೆ ಹೊತ್ತು ಎತ್ತುಗಳನ್ನು ಕಿಚ್ಚು ಹಾಯಿಸಿ ಸಂಭ್ರಮಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>