<p><strong>ಚಾಮರಾಜನಗರ</strong>: ಜಿಲ್ಲೆಯಾದ್ಯಂತ ಮಕರ ಸಂಕ್ರಾಂತಿ ಆಚರಣೆಗೆ ಸಿದ್ಧತೆಗಳು ನಡೆದಿದ್ದು, ಮಾರುಕಟ್ಟೆಯಲ್ಲಿ ಹಬ್ಬಕ್ಕೆ ಬೇಕಾದ ಅಗತ್ಯ ವಸ್ತುಗಳ ಖರೀದಿ ಭರಾಟೆ ಜೋರಾಗಿದೆ. </p>.<p>ನಗರದ ಚಾಮರಾಜೇಶ್ವರ ದೇವಸ್ಥಾನದ ಸುತ್ತಮುತ್ತಲಿನ ವಾಣಿಜ್ಯ ಮಳಿಗೆಗಳು, ದೊಡ್ಡ ಅಂಗಡಿ, ಚಿಕ್ಕ ಅಂಗಡಿ ಬೀದಿಗಳಲ್ಲಿ ಎಳ್ಳು, ಬೆಲ್ಲ ಸಹಿತ ಸಕ್ಕರೆ ಅಚ್ಚುಗಳನ್ನು ಮಾರಾಟ ಮಾಡಲಾಗುತ್ತಿದೆ.</p>.<p>ಕೆಲವು ವ್ಯಾಪಾರಿಗಳು ಎಳ್ಳು, ಬೆಲ್ಲ, ಕಡಲೆ, ಕೊಬ್ಬರಿ ತುಂಡು, ಕಡಲೆಬೀಜ ಹಾಗೂ ಸಿಹಿ ಜೀರಿಗೆ ಸೇರಿಸಿದ 100 ಗ್ರಾಂನಿಂದ 1 ಕೆ.ಜಿವರೆಗಿನ ಪೊಟ್ಟಣಗಳನ್ನು ಮಾರಾಟ ಮಾಡುತ್ತಿದ್ದಾರೆ. ಕೆಲವರು ಬಿಡಿಬಿಡಿಯಾಗಿ ಮಾರಾಟ ಮಾಡುತ್ತಿದ್ದಾರೆ.</p>.<p>ಗ್ರಾಹಕರು ಇಚ್ಛೆಗೆ ಅನುಗುಣವಾಗಿ ಬಿಡಿಬಿಡಿ ಪದಾರ್ಥಗಳನ್ನು ಖರೀದಿಸಿ ನಂತರ ಒಟ್ಟಾಗಿ ಸೇರಿಸಿ ಚಿಕ್ಕ ಪೊಟ್ಟಣಗಳನ್ನು ತಯಾರಿಸಿ ಬಂಧುಗಳು, ನೆರೆ ಹೊರೆಯವರಿಗೆ ಹಂಚಿ ಸಂಕ್ರಾಂತಿ ಹಬ್ಬವನ್ನು ಆಚರಿಸುತ್ತಾರೆ ಎನ್ನುತ್ತಾರೆ ವ್ಯಾಪಾರಿ ಸುರೇಶ್.</p>.<p>ಹಬ್ಬಕ್ಕೆ ಹೂ, ಹಣ್ಣು, ತರಕಾರಿ ಖರೀದಿಯೂ ಹೆಚ್ಚಾಗಿದ್ದು ದಿನಸಿ ಅಂಗಡಿಗಳು ಗ್ರಾಹಕರಿಂದ ಗಿಜಿಗುಡುತ್ತಿವೆ. ಗ್ರಾಮೀಣ ಭಾಗಗಳಿಂದ ಹೆಚ್ಚಾಗಿ ಜನರು ನಗರಕ್ಕೆ ಬಂದು ಖರೀದಿ ಮಾಡುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ಜಿಲ್ಲೆಯಾದ್ಯಂತ ಮಕರ ಸಂಕ್ರಾಂತಿ ಆಚರಣೆಗೆ ಸಿದ್ಧತೆಗಳು ನಡೆದಿದ್ದು, ಮಾರುಕಟ್ಟೆಯಲ್ಲಿ ಹಬ್ಬಕ್ಕೆ ಬೇಕಾದ ಅಗತ್ಯ ವಸ್ತುಗಳ ಖರೀದಿ ಭರಾಟೆ ಜೋರಾಗಿದೆ. </p>.<p>ನಗರದ ಚಾಮರಾಜೇಶ್ವರ ದೇವಸ್ಥಾನದ ಸುತ್ತಮುತ್ತಲಿನ ವಾಣಿಜ್ಯ ಮಳಿಗೆಗಳು, ದೊಡ್ಡ ಅಂಗಡಿ, ಚಿಕ್ಕ ಅಂಗಡಿ ಬೀದಿಗಳಲ್ಲಿ ಎಳ್ಳು, ಬೆಲ್ಲ ಸಹಿತ ಸಕ್ಕರೆ ಅಚ್ಚುಗಳನ್ನು ಮಾರಾಟ ಮಾಡಲಾಗುತ್ತಿದೆ.</p>.<p>ಕೆಲವು ವ್ಯಾಪಾರಿಗಳು ಎಳ್ಳು, ಬೆಲ್ಲ, ಕಡಲೆ, ಕೊಬ್ಬರಿ ತುಂಡು, ಕಡಲೆಬೀಜ ಹಾಗೂ ಸಿಹಿ ಜೀರಿಗೆ ಸೇರಿಸಿದ 100 ಗ್ರಾಂನಿಂದ 1 ಕೆ.ಜಿವರೆಗಿನ ಪೊಟ್ಟಣಗಳನ್ನು ಮಾರಾಟ ಮಾಡುತ್ತಿದ್ದಾರೆ. ಕೆಲವರು ಬಿಡಿಬಿಡಿಯಾಗಿ ಮಾರಾಟ ಮಾಡುತ್ತಿದ್ದಾರೆ.</p>.<p>ಗ್ರಾಹಕರು ಇಚ್ಛೆಗೆ ಅನುಗುಣವಾಗಿ ಬಿಡಿಬಿಡಿ ಪದಾರ್ಥಗಳನ್ನು ಖರೀದಿಸಿ ನಂತರ ಒಟ್ಟಾಗಿ ಸೇರಿಸಿ ಚಿಕ್ಕ ಪೊಟ್ಟಣಗಳನ್ನು ತಯಾರಿಸಿ ಬಂಧುಗಳು, ನೆರೆ ಹೊರೆಯವರಿಗೆ ಹಂಚಿ ಸಂಕ್ರಾಂತಿ ಹಬ್ಬವನ್ನು ಆಚರಿಸುತ್ತಾರೆ ಎನ್ನುತ್ತಾರೆ ವ್ಯಾಪಾರಿ ಸುರೇಶ್.</p>.<p>ಹಬ್ಬಕ್ಕೆ ಹೂ, ಹಣ್ಣು, ತರಕಾರಿ ಖರೀದಿಯೂ ಹೆಚ್ಚಾಗಿದ್ದು ದಿನಸಿ ಅಂಗಡಿಗಳು ಗ್ರಾಹಕರಿಂದ ಗಿಜಿಗುಡುತ್ತಿವೆ. ಗ್ರಾಮೀಣ ಭಾಗಗಳಿಂದ ಹೆಚ್ಚಾಗಿ ಜನರು ನಗರಕ್ಕೆ ಬಂದು ಖರೀದಿ ಮಾಡುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>