<p><strong>ಸಂತೇಮರಹಳ್ಳಿ</strong>: ‘ಸಮೀಪದ ಕುದೇರು ಗ್ರಾಮದ ಹಳೆಯ ಉಪ ನೋಂದಣಾಧಿಕಾರಿ ಕಚೇರಿ ಶಿಥಿಲವಾಗಿದ್ದು, ನೂತನ ಕಟ್ಟಡ ನಿರ್ಮಿಸಿ ಅನುಕೂಲ ಮಾಡಿಕೊಡಬೇಕು’ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<p>‘ಗ್ರಾಮದಲ್ಲಿರುವ ಹಳೆಯ ಕಚೇರಿ ಸಂಪೂರ್ಣ ಶಿಥಿಲವಾಗಿರುವ ಹಿನ್ನೆಲೆಯಲ್ಲಿ ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಕಟ್ಟಡವು ತುಂಬಾ ಹಳೆಯದಾಗಿದ್ದು, ಗೋಡೆಗಳು ಬಿರುಕು ಬಿಟ್ಟಿವೆ. ಮಳೆ ಬಂದಾಗ ಚಾವಣಿ ಸೋರುತ್ತಿದೆ. ಕಳೆದ 3 ವರ್ಷಗಳ ಹಿಂದೆ ಕಚೇರಿಯನ್ನು ಬಾಡಿಗೆ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಉಪ ನೋಂದಣಾಧಿಕಾರಿ ಕಚೇರಿಗೆ ಮೈಸೂರು ಜಿಲ್ಲೆಯ ಕೌಲಂದೆ ಹೋಬಳಿಯ 12 ಗ್ರಾಮಗಳು, ಚಾಮರಾಜನಗರ ಕಸಬಾ ಹೋಬಳಿಯ 8 ಗ್ರಾಮಗಳು ಹಾಗೂ ಸಂತೇಮರಹಳ್ಳಿ ಹೋಬಳಿಗೆ ಸೇರಿದ 45 ಗ್ರಾಮಗಳು ಸೇರಿವೆ’ ಎಂದು ಮುಖಂಡರಾದ ರಾಜೇಂದ್ರಸ್ವಾಮಿ, ಡಿ.ಪಿ.ಶಿವಕುಮಾರಸ್ವಾಮಿ ಹೇಳಿದರು.</p>.<p>‘ಜಮೀನು ಹಾಗೂ ನಿವೇಶನಗಳ ನೋಂದಣಿಗಾಗಿ ಗ್ರಾಮಸ್ಥರು ಈ ಉಪ ನೋಂದಣಿ ಕಚೇರಿಗೆ ಬರಬೇಕಾಗಿದೆ. ಈ ಹಿನ್ನೆಲೆಯಲ್ಲಿ ಶಿಥಿಲಾವಸ್ಥೆ ತಲುಪಿರುವ ಕಟ್ಟಡವನ್ನು ತೆರವುಗೊಳಿಸಿ ನೂತನವಾಗಿ ನಿರ್ಮಿಸಬೇಕು’ ಎಂದು ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂತೇಮರಹಳ್ಳಿ</strong>: ‘ಸಮೀಪದ ಕುದೇರು ಗ್ರಾಮದ ಹಳೆಯ ಉಪ ನೋಂದಣಾಧಿಕಾರಿ ಕಚೇರಿ ಶಿಥಿಲವಾಗಿದ್ದು, ನೂತನ ಕಟ್ಟಡ ನಿರ್ಮಿಸಿ ಅನುಕೂಲ ಮಾಡಿಕೊಡಬೇಕು’ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<p>‘ಗ್ರಾಮದಲ್ಲಿರುವ ಹಳೆಯ ಕಚೇರಿ ಸಂಪೂರ್ಣ ಶಿಥಿಲವಾಗಿರುವ ಹಿನ್ನೆಲೆಯಲ್ಲಿ ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಕಟ್ಟಡವು ತುಂಬಾ ಹಳೆಯದಾಗಿದ್ದು, ಗೋಡೆಗಳು ಬಿರುಕು ಬಿಟ್ಟಿವೆ. ಮಳೆ ಬಂದಾಗ ಚಾವಣಿ ಸೋರುತ್ತಿದೆ. ಕಳೆದ 3 ವರ್ಷಗಳ ಹಿಂದೆ ಕಚೇರಿಯನ್ನು ಬಾಡಿಗೆ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಉಪ ನೋಂದಣಾಧಿಕಾರಿ ಕಚೇರಿಗೆ ಮೈಸೂರು ಜಿಲ್ಲೆಯ ಕೌಲಂದೆ ಹೋಬಳಿಯ 12 ಗ್ರಾಮಗಳು, ಚಾಮರಾಜನಗರ ಕಸಬಾ ಹೋಬಳಿಯ 8 ಗ್ರಾಮಗಳು ಹಾಗೂ ಸಂತೇಮರಹಳ್ಳಿ ಹೋಬಳಿಗೆ ಸೇರಿದ 45 ಗ್ರಾಮಗಳು ಸೇರಿವೆ’ ಎಂದು ಮುಖಂಡರಾದ ರಾಜೇಂದ್ರಸ್ವಾಮಿ, ಡಿ.ಪಿ.ಶಿವಕುಮಾರಸ್ವಾಮಿ ಹೇಳಿದರು.</p>.<p>‘ಜಮೀನು ಹಾಗೂ ನಿವೇಶನಗಳ ನೋಂದಣಿಗಾಗಿ ಗ್ರಾಮಸ್ಥರು ಈ ಉಪ ನೋಂದಣಿ ಕಚೇರಿಗೆ ಬರಬೇಕಾಗಿದೆ. ಈ ಹಿನ್ನೆಲೆಯಲ್ಲಿ ಶಿಥಿಲಾವಸ್ಥೆ ತಲುಪಿರುವ ಕಟ್ಟಡವನ್ನು ತೆರವುಗೊಳಿಸಿ ನೂತನವಾಗಿ ನಿರ್ಮಿಸಬೇಕು’ ಎಂದು ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>