<p><strong>ಸಂತೇಮರಹಳ್ಳಿ</strong>: ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸೋಮವಾರ ವಿಶ್ವ ತಂಬಾಕು ವಿರೋಧಿ ದಿನವನ್ನು ಆಚರಿಸಲಾಯಿತು.</p>.<p>ಪಿಎಸ್ಐ ಮೋಹನ್ ಕುಮಾರ್ ಮಾತನಾಡಿ, ‘ಇತ್ತೀಚಿನ ದಿನಗಳಲ್ಲಿ ಅತಿಯಾದ ತಂಬಾಕು ಸೇವನೆಯಿಂದ ಯುವಕರು ಸಾಯುತ್ತಿರುವ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ಅರಿವು ಮೂಡಿಸುವ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ವಿಶ್ವ ತಂಬಾಕು ವಿರೋಧಿ ದಿನವನ್ನು ಆಯೋಜಿಸಿರುವುದು ಉತ್ತಮ ಬೆಳವಣಿಗೆ’ ಎಂದರು.</p>.<p>‘ಯೋಜನೆ ಕಾರ್ಯಕ್ರಮಗಳು ಸಮಾಜಕ್ಕೆ ಅತ್ಯಂತ ಪೂರಕವಾಗಿವೆ. ಸಾರ್ವಜನಿಕರು ತಂಬಾಕು ಹಾಗೂ ಇನ್ನಿತರೆ ಮಾದಕ ವಸ್ತುಗಳ ವ್ಯಸನದಿಂದ ದೂರವಿದ್ದು, ತಮ್ಮ ಮಕ್ಕಳನ್ನು ರಕ್ಷಿಸಿಕೊಳ್ಳಬೇಕು. ಪೊಲೀಸ್ ಇಲಾಖೆ ಸಮುದಾಯ ಮತ್ತು ಕುಟುಂಬಗಳ ರಕ್ಷಣೆಗೆ ಸದಾ ಸಿದ್ಧವಿದೆ. ಇಲಾಖೆಯ ಸೌಲಭ್ಯಗಳನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಯಳಂದೂರು ತಾಲ್ಲೂಕು ಯೋಜನಾಧಿಕಾರಿ ಆನಂದ ಗೌಡ ಮಾತನಾಡಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಸಾರ್ವಜನಿಕರಿಗೆ ದೊರೆಯುವ ಸೌಲಭ್ಯಗಳು ಹಾಗೂ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.</p>.<p>ಸಂಪನ್ಮೂಲ ವ್ಯಕ್ತಿ ಶ್ರೀಕಾಂತ್ ಅವರು, ತಂಬಾಕು ಸೇವನೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳು ಮತ್ತು ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.</p>.<p>ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಸವಿತಾ, ಪೊಲೀಸ್ ಇಲಾಖೆ ಸಿಬ್ಬಂದಿಗಳಾದ ಆಕಾಶ್ ಬಾಬು ಹಾಗೂ ರಮೇಶ್, ಒಕ್ಕೂಟದ ಅಧ್ಯಕ್ಷ ರಾಜು, ಮೇಲ್ವಿಚಾರಕ ಸತೀಶ್, ಜ್ಞಾನವಿಕಾಸ ಸಮನ್ವಯಾಧಿಕಾರಿ ಸಿಂಧು, ಸೇವಾ ಪ್ರತಿನಿಧಿ ಮಮತಾ, ಸಂಘದ ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-37-160975461</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂತೇಮರಹಳ್ಳಿ</strong>: ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸೋಮವಾರ ವಿಶ್ವ ತಂಬಾಕು ವಿರೋಧಿ ದಿನವನ್ನು ಆಚರಿಸಲಾಯಿತು.</p>.<p>ಪಿಎಸ್ಐ ಮೋಹನ್ ಕುಮಾರ್ ಮಾತನಾಡಿ, ‘ಇತ್ತೀಚಿನ ದಿನಗಳಲ್ಲಿ ಅತಿಯಾದ ತಂಬಾಕು ಸೇವನೆಯಿಂದ ಯುವಕರು ಸಾಯುತ್ತಿರುವ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ಅರಿವು ಮೂಡಿಸುವ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ವಿಶ್ವ ತಂಬಾಕು ವಿರೋಧಿ ದಿನವನ್ನು ಆಯೋಜಿಸಿರುವುದು ಉತ್ತಮ ಬೆಳವಣಿಗೆ’ ಎಂದರು.</p>.<p>‘ಯೋಜನೆ ಕಾರ್ಯಕ್ರಮಗಳು ಸಮಾಜಕ್ಕೆ ಅತ್ಯಂತ ಪೂರಕವಾಗಿವೆ. ಸಾರ್ವಜನಿಕರು ತಂಬಾಕು ಹಾಗೂ ಇನ್ನಿತರೆ ಮಾದಕ ವಸ್ತುಗಳ ವ್ಯಸನದಿಂದ ದೂರವಿದ್ದು, ತಮ್ಮ ಮಕ್ಕಳನ್ನು ರಕ್ಷಿಸಿಕೊಳ್ಳಬೇಕು. ಪೊಲೀಸ್ ಇಲಾಖೆ ಸಮುದಾಯ ಮತ್ತು ಕುಟುಂಬಗಳ ರಕ್ಷಣೆಗೆ ಸದಾ ಸಿದ್ಧವಿದೆ. ಇಲಾಖೆಯ ಸೌಲಭ್ಯಗಳನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಯಳಂದೂರು ತಾಲ್ಲೂಕು ಯೋಜನಾಧಿಕಾರಿ ಆನಂದ ಗೌಡ ಮಾತನಾಡಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಸಾರ್ವಜನಿಕರಿಗೆ ದೊರೆಯುವ ಸೌಲಭ್ಯಗಳು ಹಾಗೂ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.</p>.<p>ಸಂಪನ್ಮೂಲ ವ್ಯಕ್ತಿ ಶ್ರೀಕಾಂತ್ ಅವರು, ತಂಬಾಕು ಸೇವನೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳು ಮತ್ತು ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.</p>.<p>ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಸವಿತಾ, ಪೊಲೀಸ್ ಇಲಾಖೆ ಸಿಬ್ಬಂದಿಗಳಾದ ಆಕಾಶ್ ಬಾಬು ಹಾಗೂ ರಮೇಶ್, ಒಕ್ಕೂಟದ ಅಧ್ಯಕ್ಷ ರಾಜು, ಮೇಲ್ವಿಚಾರಕ ಸತೀಶ್, ಜ್ಞಾನವಿಕಾಸ ಸಮನ್ವಯಾಧಿಕಾರಿ ಸಿಂಧು, ಸೇವಾ ಪ್ರತಿನಿಧಿ ಮಮತಾ, ಸಂಘದ ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-37-160975461</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>