<p><strong>ಚಾಮರಾಜನಗರ:</strong> ಹಿಂದೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ನಗರದ ಶ್ರೀ ಚಾಮರಾಜೇಶ್ವರ ಸ್ವಾಮಿ ದೇವಾಲಯದಲ್ಲಿ ಏಪ್ರಿಲ್ 26ರಂದು ‘ಸಪ್ತಪದಿ’ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮ ನಡೆಯಲಿದೆ.</p>.<p>ಶುಕ್ರವಾರ ಜಿಲ್ಲಾಧಿಕಾರಿಡಾ.ಎಂ.ಆರ್.ರವಿ ಅವರು ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದರು.</p>.<p>‘ಯೋಜನೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಕರಪತ್ರ, ಬ್ಯಾನರ್ಗಳ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಸರ್ಕಾರಿ ಹಾಗೂ ಖಾಸಗಿ ಬಸ್ಸುಗಳಲ್ಲಿ ಸಪ್ತಪದಿ ವಿವಾಹ ಕುರಿತ ಮಾಹಿತಿ ಪೋಸ್ಟರ್ಗಳನ್ನು ಅಳವಡಿಸಬೇಕು’ ಎಂದು ಅವರು ಸೂಚಿಸಿದರು.</p>.<p><strong>ಸಪ್ತಪದಿ ರಥ: </strong>ಈ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮದ ಬಗ್ಗೆಪ್ರಚಾರ ಕೈಗೊಳ್ಳುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಸಪ್ತಪದಿ ರಥ ಸಂಚರಿಸಲಿದೆ. ರಥವು ಆಕರ್ಷಣೀಯವಾಗಿಯೂ ಹಾಗೂ ಮಾಹಿತಿದಾಯಕವಾಗಿರುವಂತೆ ನೋಡಿಕೊಳ್ಳಬೇಕು. ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ ಅದರಲ್ಲಿರಬೇಕು’ ಎಂದರು.</p>.<p>‘ವರನಿಗೆ ಪಂಚೆ, ಶರ್ಟ್, ಶಲ್ಯ, ವಧುವಿಗೆ ಧಾರೆ ಸೀರೆ, ರವಿಕೆ ಕಣ, ಚಿನ್ನದ ತಾಳಿ ಹಾಗೂ ಎರಡು ಚಿನ್ನದ ಗುಂಡು ಇನ್ನಿತರ ವಿವಾಹ ಸಂಬಂಧ ಸಾಮಾಗ್ರಿಗಳನ್ನು ನೀಡಲಾಗುತ್ತದೆ. ಈ ಬಗ್ಗೆಯೂ ಮಾಹಿತಿ ನೀಡಬೇಕು. ಅರ್ಜಿಗಳ ವಿತರಣೆ ಸರಿಯಾದ ರೀತಿಯಲ್ಲಿ ಆಗಬೇಕು. ಯೋಜನೆಯ ಅರ್ಜಿಗಳು ಜಿಲ್ಲಾಧಿಕಾರಿ ಕಚೇರಿ, ನಾಡಕಚೇರಿ ಹಾಗೂ ದೇವಸ್ಥಾನಗಳಲ್ಲಿ ಸಮರ್ಪಕವಾಗಿ ದೊರೆಯುವ ವ್ಯವಸ್ಥೆ ಮಾಡಬೇಕು’ ಎಂದು ತಿಳಿಸಿದರು.</p>.<p>‘ಇದು ಸರ್ಕಾರದ ಮಹತ್ವಾಂಕ್ಷೆಯ ಯೋಜನೆ. ಮೊಟ್ಟಮೊದಲ ಬಾರಿಗೆ ಚಾಮರಾಜನಗರದಲ್ಲಿ ಆಯೋಜನೆ ಯಾಗುತ್ತಿರುವ ಸರಳ ವಿವಾಹ ಕಾರ್ಯಕ್ರಮವನ್ನು ಹೆಚ್ಚು ಜೋಡಿಗಳು ಸದುಪಯೋಗ ಮಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಮಾಡಬೇಕು’ ಎಂದು ಜಿಲ್ಲಾಧಿಕಾರಿ ತಿಳಿಸಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್.ಆನಂದ್, ಡಿವೈಎಸ್ಪಿ ಜೆ.ಮೋಹನ್, ತಹಶೀಲ್ದಾರ್ ಮಹೇಶ್, ಬಿಳಿಗಿರಿರಂಗನಬೆಟ್ಟದ ವ್ಯವಸ್ಥಾಪಕರ ಸಂಘದ ಅಧ್ಯಕ್ಷರಾದ ಆಲ್ದೂರು ರಾಜಶೇಖರ್, ಸದಸ್ಯರಾದ ಮಹೇಶ್ ಕಾಂದಳ್ಳಿ, ದೇವಾಲಯದ ಅರ್ಚಕರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.</p>.<p class="Briefhead"><strong>ಮಾರ್ಚ್ 28ಕ್ಕೆ ಕೊನೆ ದಿನ</strong></p>.<p>ಯೋಜನೆ ಅಡಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲು ಬಯಸುವ ವಧು ವರರಿಗೆ ನೋಂದಣಿ ಮಾಡಿಕೊಳ್ಳಲು ಇದೇ 28ರವರೆಗೆ ಅವಕಾಶ ಇದೆ.ವಧು-ವರರ ಪಟ್ಟಿಗೆ ಆಕ್ಷೇಪಣೆ ಇದ್ದಲ್ಲಿ ಏಪ್ರಿಲ್ 7ರವರೆಗೂ ಸಲ್ಲಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಹಿಂದೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ನಗರದ ಶ್ರೀ ಚಾಮರಾಜೇಶ್ವರ ಸ್ವಾಮಿ ದೇವಾಲಯದಲ್ಲಿ ಏಪ್ರಿಲ್ 26ರಂದು ‘ಸಪ್ತಪದಿ’ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮ ನಡೆಯಲಿದೆ.</p>.<p>ಶುಕ್ರವಾರ ಜಿಲ್ಲಾಧಿಕಾರಿಡಾ.ಎಂ.ಆರ್.ರವಿ ಅವರು ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದರು.</p>.<p>‘ಯೋಜನೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಕರಪತ್ರ, ಬ್ಯಾನರ್ಗಳ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಸರ್ಕಾರಿ ಹಾಗೂ ಖಾಸಗಿ ಬಸ್ಸುಗಳಲ್ಲಿ ಸಪ್ತಪದಿ ವಿವಾಹ ಕುರಿತ ಮಾಹಿತಿ ಪೋಸ್ಟರ್ಗಳನ್ನು ಅಳವಡಿಸಬೇಕು’ ಎಂದು ಅವರು ಸೂಚಿಸಿದರು.</p>.<p><strong>ಸಪ್ತಪದಿ ರಥ: </strong>ಈ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮದ ಬಗ್ಗೆಪ್ರಚಾರ ಕೈಗೊಳ್ಳುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಸಪ್ತಪದಿ ರಥ ಸಂಚರಿಸಲಿದೆ. ರಥವು ಆಕರ್ಷಣೀಯವಾಗಿಯೂ ಹಾಗೂ ಮಾಹಿತಿದಾಯಕವಾಗಿರುವಂತೆ ನೋಡಿಕೊಳ್ಳಬೇಕು. ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ ಅದರಲ್ಲಿರಬೇಕು’ ಎಂದರು.</p>.<p>‘ವರನಿಗೆ ಪಂಚೆ, ಶರ್ಟ್, ಶಲ್ಯ, ವಧುವಿಗೆ ಧಾರೆ ಸೀರೆ, ರವಿಕೆ ಕಣ, ಚಿನ್ನದ ತಾಳಿ ಹಾಗೂ ಎರಡು ಚಿನ್ನದ ಗುಂಡು ಇನ್ನಿತರ ವಿವಾಹ ಸಂಬಂಧ ಸಾಮಾಗ್ರಿಗಳನ್ನು ನೀಡಲಾಗುತ್ತದೆ. ಈ ಬಗ್ಗೆಯೂ ಮಾಹಿತಿ ನೀಡಬೇಕು. ಅರ್ಜಿಗಳ ವಿತರಣೆ ಸರಿಯಾದ ರೀತಿಯಲ್ಲಿ ಆಗಬೇಕು. ಯೋಜನೆಯ ಅರ್ಜಿಗಳು ಜಿಲ್ಲಾಧಿಕಾರಿ ಕಚೇರಿ, ನಾಡಕಚೇರಿ ಹಾಗೂ ದೇವಸ್ಥಾನಗಳಲ್ಲಿ ಸಮರ್ಪಕವಾಗಿ ದೊರೆಯುವ ವ್ಯವಸ್ಥೆ ಮಾಡಬೇಕು’ ಎಂದು ತಿಳಿಸಿದರು.</p>.<p>‘ಇದು ಸರ್ಕಾರದ ಮಹತ್ವಾಂಕ್ಷೆಯ ಯೋಜನೆ. ಮೊಟ್ಟಮೊದಲ ಬಾರಿಗೆ ಚಾಮರಾಜನಗರದಲ್ಲಿ ಆಯೋಜನೆ ಯಾಗುತ್ತಿರುವ ಸರಳ ವಿವಾಹ ಕಾರ್ಯಕ್ರಮವನ್ನು ಹೆಚ್ಚು ಜೋಡಿಗಳು ಸದುಪಯೋಗ ಮಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಮಾಡಬೇಕು’ ಎಂದು ಜಿಲ್ಲಾಧಿಕಾರಿ ತಿಳಿಸಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್.ಆನಂದ್, ಡಿವೈಎಸ್ಪಿ ಜೆ.ಮೋಹನ್, ತಹಶೀಲ್ದಾರ್ ಮಹೇಶ್, ಬಿಳಿಗಿರಿರಂಗನಬೆಟ್ಟದ ವ್ಯವಸ್ಥಾಪಕರ ಸಂಘದ ಅಧ್ಯಕ್ಷರಾದ ಆಲ್ದೂರು ರಾಜಶೇಖರ್, ಸದಸ್ಯರಾದ ಮಹೇಶ್ ಕಾಂದಳ್ಳಿ, ದೇವಾಲಯದ ಅರ್ಚಕರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.</p>.<p class="Briefhead"><strong>ಮಾರ್ಚ್ 28ಕ್ಕೆ ಕೊನೆ ದಿನ</strong></p>.<p>ಯೋಜನೆ ಅಡಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲು ಬಯಸುವ ವಧು ವರರಿಗೆ ನೋಂದಣಿ ಮಾಡಿಕೊಳ್ಳಲು ಇದೇ 28ರವರೆಗೆ ಅವಕಾಶ ಇದೆ.ವಧು-ವರರ ಪಟ್ಟಿಗೆ ಆಕ್ಷೇಪಣೆ ಇದ್ದಲ್ಲಿ ಏಪ್ರಿಲ್ 7ರವರೆಗೂ ಸಲ್ಲಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>