ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್ ಅವರು ಈ ಬೆಳವಣಿಗೆಯನ್ನು ‘ಪ್ರಜಾವಾಣಿ’ಗೆ ಖಚಿತ ಪಡಿಸಿದ್ದು, ‘ನಮಗೆ ನೀಡಿರುವ ಮಾಹಿತಿಯ ಮೇರೆಗೆ ಸ್ಯಾಟಲೈಟ್ ಫೋನ್ ಅನ್ನು ಯಾರು ಬಳಸಿರಬಹುದು ಎಂಬುದರ ಬಗ್ಗೆ ತನಿಖೆ ಆರಂಭಿಸಿದ್ದೇವೆ. ನಕ್ಸಲ್ ನಿಗ್ರಹ ಪಡೆ ಆ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದೆ. ಪೊಲೀಸರು ಸುತ್ತಮುತ್ತಲಿನ ಪ್ರದೇಶದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ’ ಎಂದು ಹೇಳಿದರು.