ಗಣೇಶೋತ್ಸವದಲ್ಲಿ ಸಾವರ್ಕರ್ ಪೋಟೊ ಇರಿಸುವ ವಿಚಾರ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಸಾವರ್ಕರ್ ಒಬ್ಬ ನಾಸ್ತಿಕ. ದೇವರ ಬಗ್ಗೆ ನಂಬಿಕೆ ಇರಲಿಲ್ಲ. ಅಂತಹವರನ್ನು ತೆಗೆದುಕೊಂಡು ಹೋಗಿ ನಂಬಿಕಸ್ಥರ ಜಾಗದಲ್ಲಿ ಇಡುವುದು ಹಾಸ್ಯಾಸ್ಪದ. ಅವರ ಆತ್ಮಕತೆ, ಚರಿತ್ರೆ ಓದದೇ ರಾಜಕೀಯ ಹಿತಾಸಕ್ತಿಗಾಗಿ ಮಾಡಲು ಹೋದವರಿಗೆ ಏನು ಹೇಳಬೇಕು ಎಂದು ಗೊತ್ತಾಗುವುದಿಲ್ಲ’ ಎಂದು ಕಿಡಿಕಾರಿದರು.