<p><strong>ಚಾಮರಾಜನಗರ: ಇ</strong>ತ್ತೀಚೆಗೆ ವರ್ಗಾವಣೆಯಾಗಿದ್ದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರಿಗೆ ಜಿಲ್ಲಾಡಳಿತದಿಂದ ಬುಧವಾರ ಬೀಳ್ಕೊಡುಗೆ ನೀಡಲಾಯಿತು. ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಿ.ಎಸ್.ರಮೇಶ್ ಅವರನ್ನು ಸ್ವಾಗತಿಸಲಾಯಿತು.</p>.<p>ನವದೆಹಲಿಯ ಕರ್ನಾಟಕ ಭವನದಲ್ಲಿ ಸಹಾಯಕ ಸ್ಥಾನಿಕ ಆಯುಕ್ತೆ ಆಗಿ ಚಾರುಲತಾ ವರ್ಗಾವಣೆಗೊಂಡಿದ್ದಾರೆ. ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಂಘ ಸಂಸ್ಥೆಗಳು, ರೈತ ಸಂಘ,ಪೌರಕಾರ್ಮಿಕ ಸಂಘಟನೆ ಮುಖಂಡರು, ಕಲಾವಿದರು, ವಿವಿಧ ಸಂಘಟನೆಗಳ ಪ್ರತಿನಿಧಿಗಳು ಗೌರವಿಸಿದರು.</p>.<p>ಸನ್ಮಾನ ಸ್ವೀಕರಿಸಿ ಮಾತನಾಡಿದ ಚಾರುಲತಾ, ‘=ಜಿಲ್ಲೆಯಲ್ಲಿ 11 ತಿಂಗಳು ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದು ನನಗೆ ದೊರೆತ ಅದೃಷ್ಟ. ಅಧಿಕಾರಿಗಳು, ಜನಪ್ರತಿನಿಧಿಗಳು, ಸಿಬ್ಬಂದಿ, ಸಂಘ–ಸಂಸ್ಥೆಗಳ ಮುಖಂಡರು, ರೈತರ ಸಂಘಟನೆಯ ಪ್ರತಿನಿಧಿಗಳ ಸಹಕಾರ ಸಿಕ್ಕಿದೆ. ನನಗೆ ತೋರಿದ ಪ್ರೀತಿ ಬೆಂಬಲಕ್ಕೆ ಚಿರಋಣಿಯಾಗಿದ್ದೇನೆ’ ಎಂದರು.</p>.<p>ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಮಾತನಾಡಿ, ‘ಚಾರುಲತಾ ಅವರಿಗೆ ಅಪಾರ ಪ್ರೀತಿ, ಸಹಕಾರ ವ್ಯಕ್ತವಾಗಿರುವುದನ್ನು ನೋಡಿದ್ದೇನೆ. ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿ ಹಾಗೂ ಅಭಿವೃದ್ಧಿಗೆ ನಾನೂ ಬದ್ಧನಾಗಿದ್ದು, ಎಲ್ಲರ ಸಹಕಾರ ಬೆಂಬಲ ಮುಂದುವರೆಯಲಿ’ ಎಂದು ಕೋರಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ ಮಾತನಾಡಿ, ‘ಚಾರುಲತಾ ಅವರು ಜಿಲ್ಲಾ ಪಂಚಾಯಿತಿ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡಿದ್ದಾರೆ. ಇದರಿಂದ ಹಲವು ಪ್ರಗತಿಪರ ಕೆಲಸಗಳು ಸಾಧ್ಯವಾಗಿವೆ’ ಎಂದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್,ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ರೈತ ಮುಖಂಡರಾದ ಭಾಗ್ಯರಾಜ್ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: ಇ</strong>ತ್ತೀಚೆಗೆ ವರ್ಗಾವಣೆಯಾಗಿದ್ದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರಿಗೆ ಜಿಲ್ಲಾಡಳಿತದಿಂದ ಬುಧವಾರ ಬೀಳ್ಕೊಡುಗೆ ನೀಡಲಾಯಿತು. ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಿ.ಎಸ್.ರಮೇಶ್ ಅವರನ್ನು ಸ್ವಾಗತಿಸಲಾಯಿತು.</p>.<p>ನವದೆಹಲಿಯ ಕರ್ನಾಟಕ ಭವನದಲ್ಲಿ ಸಹಾಯಕ ಸ್ಥಾನಿಕ ಆಯುಕ್ತೆ ಆಗಿ ಚಾರುಲತಾ ವರ್ಗಾವಣೆಗೊಂಡಿದ್ದಾರೆ. ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಂಘ ಸಂಸ್ಥೆಗಳು, ರೈತ ಸಂಘ,ಪೌರಕಾರ್ಮಿಕ ಸಂಘಟನೆ ಮುಖಂಡರು, ಕಲಾವಿದರು, ವಿವಿಧ ಸಂಘಟನೆಗಳ ಪ್ರತಿನಿಧಿಗಳು ಗೌರವಿಸಿದರು.</p>.<p>ಸನ್ಮಾನ ಸ್ವೀಕರಿಸಿ ಮಾತನಾಡಿದ ಚಾರುಲತಾ, ‘=ಜಿಲ್ಲೆಯಲ್ಲಿ 11 ತಿಂಗಳು ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದು ನನಗೆ ದೊರೆತ ಅದೃಷ್ಟ. ಅಧಿಕಾರಿಗಳು, ಜನಪ್ರತಿನಿಧಿಗಳು, ಸಿಬ್ಬಂದಿ, ಸಂಘ–ಸಂಸ್ಥೆಗಳ ಮುಖಂಡರು, ರೈತರ ಸಂಘಟನೆಯ ಪ್ರತಿನಿಧಿಗಳ ಸಹಕಾರ ಸಿಕ್ಕಿದೆ. ನನಗೆ ತೋರಿದ ಪ್ರೀತಿ ಬೆಂಬಲಕ್ಕೆ ಚಿರಋಣಿಯಾಗಿದ್ದೇನೆ’ ಎಂದರು.</p>.<p>ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಮಾತನಾಡಿ, ‘ಚಾರುಲತಾ ಅವರಿಗೆ ಅಪಾರ ಪ್ರೀತಿ, ಸಹಕಾರ ವ್ಯಕ್ತವಾಗಿರುವುದನ್ನು ನೋಡಿದ್ದೇನೆ. ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿ ಹಾಗೂ ಅಭಿವೃದ್ಧಿಗೆ ನಾನೂ ಬದ್ಧನಾಗಿದ್ದು, ಎಲ್ಲರ ಸಹಕಾರ ಬೆಂಬಲ ಮುಂದುವರೆಯಲಿ’ ಎಂದು ಕೋರಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ ಮಾತನಾಡಿ, ‘ಚಾರುಲತಾ ಅವರು ಜಿಲ್ಲಾ ಪಂಚಾಯಿತಿ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡಿದ್ದಾರೆ. ಇದರಿಂದ ಹಲವು ಪ್ರಗತಿಪರ ಕೆಲಸಗಳು ಸಾಧ್ಯವಾಗಿವೆ’ ಎಂದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್,ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ರೈತ ಮುಖಂಡರಾದ ಭಾಗ್ಯರಾಜ್ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>