ಶಾಸಕ ಆರ್.ನರೇಂದ್ರ ಅವರು ಮಾತನಾಡಿ, ‘ಮೂರು ತಿಂಗಳ ಹಿಂದೆಯೇ ಶಿವಮ್ಮ ಅವರು ರಾಜೀನಾಮೆ ನೀಡಬೇಕಿತ್ತು. ಆದರೆ ಕೆಲವು ಸಣ್ಣ ಪುಟ್ಟ ವಿಚಾರಗಳಿಗೆ ನೀಡಿರಲಿಲ್ಲ ಮತ್ತು ಅವರ 6 ತಿಂಗಳ ಗೌರವ ಧನವೂ ಬಂದಿರಲಿಲ್ಲ. ಈಗ ಅವರ ಖಾತೆಗೆ ಗೌರವ ಧನ ಬಂದಿದೆ. ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ, ಕೆಪಿಸಿಸಿ ವಕ್ತಾರ ಆರ್.ಧ್ರುವನಾರಾಯಣ ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಅವರಿಗೆ ರಾಜೀನಾಮೆ ನೀಡುವಂತೆ ಸಲಹೆ ನೀಡಿದ್ದೇವೆ. ಸದಸ್ಯೆ ಅಶ್ವಿನಿ ಮತ್ತು ಶಿವಮ್ಮ ಅವರ ನಡುವೆ ಸಂಧಾನವನ್ನೂ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಎಲ್ಲಾ ಸದಸ್ಯರು ಪಕ್ಷವನ್ನು ಇನ್ನಷ್ಟು ಬಲಪಡಿಸಿ ಉತ್ತಮ ಕೆಲಸ ಮಾಡಿ ಎಂದು ಸೂಚನೆ ನೀಡಿದ್ದೇವೆ’ ಎಂದರು.