ದೇವಾಲಯದಲ್ಲಿ ತ್ರಿಕಾಲ ಪೂಜೆ ಪ್ರಾರಂಭವಾಗಿದ್ದು, ಬೆಳಿಗ್ಗೆ 4ರಿಂದ ಬೆಳಿಗ್ಗೆ 6ರವರೆಗೆ ಮೊದಲ ಪೂಜೆ, ಅಭಿಷೇಕ, ಬಿಲ್ವಾರ್ಚನೆ, ಆರತಿ, 10.30ಕ್ಕೆ ಎರಡನೇ ಪೂಜೆ, ಸಂಜೆ 6.30ರಿಂದ ರಾತ್ರಿ 8.30ರವರೆಗೆ ಮೂರನೇ ಪೂಜೆ ಜರುಗಿದವು. ಅಲ್ಲದೆ ರಾತ್ರಿ 7ಕ್ಕೆ ಚಿನ್ನದ ತೇರಿನ ಉತ್ಸವ ವಿಭೃಂಜಣೆಯಿಂದ ಜರುಗಿತು. ಮೆರವಣಿಗೆಯಲ್ಲಿ ಆನೆ(ಉಮಾಮಹೇಶ್ವರಿ), ನಂದಿಕಂಬ, ವೀರಗಾಸೆ ಕುಣಿತ ವಿವಿಧ ಕಲಾ ತಂಡಗಳು ಭಾಗವಹಿಸಿದ್ದವು. ನೆರೆದಿದ್ದ ಭಕ್ತರು ಉಘೇ ಮಾದಪ್ಪ, ಉಘೇ ಮಾಯ್ಕಾರ ಎಂಬ ಜಯಘೋಷ ಹಾಕಿದರು.