<p><strong>ಚಾಮರಾಜನಗರ:</strong> ‘ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದಲ್ಲಿ ಅವರೇ ನನಗೆ ಗಂಟು ಬಿದ್ದಿದ್ದರು. ಇದರಲ್ಲಿ ನನ್ನ ತಪ್ಪು ಏನೂ ಇರಲಿಲ್ಲ. ಹಾಗಿದ್ದರೂ ನನ್ನ ವಿರುದ್ಧ ಅಪಪ್ರಚಾರ ಮಾಡಲಾಯಿತು’ ಎಂದು ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದರು.</p>.<p>ಚಾಮರಾಜನಗರ ಸಮೀಪದ ಯಡಬೆಟ್ಟದಲ್ಲಿ ನಳಂದ ಜ್ಞಾನ ಮತ್ತು ಅಧ್ಯಯನ ಕೇಂದ್ರ ಹಾಗೂ ನಳಂದ ಬೌದ್ಧ ವಿಶ್ವವಿದ್ಯಾಲಯಕ್ಕೆ ಶನಿವಾರ ಭೂಮಿಪೂಜೆ, ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದರು. ‘ಧರ್ಮದ ವಿಚಾರದ ಬಗ್ಗೆ ಮಾತನಾಡುವಾಗ ನಾನು ಎಚ್ಚರಿಕೆಯಿಂದ ಇರುತ್ತೇನೆ. ಏನಾದರೂ ಹೇಳಿದರೆ ಅದು ವಿವಾದ ಆಗುತ್ತದೆ’ ಎಂದರು.</p>.<p>‘ವೀರಶೈವ– ಲಿಂಗಾಯತರಲ್ಲಿ ಗುರುಪರಂಪರೆ ಮತ್ತು ವಿರಕ್ತ ಪರಂಪರೆ ಎಂಬ ಎರಡು ವಿಧ ಇದೆ. ಒಂದು ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿದಾಗ ಲಿಂಗಾಯತ ಪ್ರತ್ಯೇಕ ಧರ್ಮ ಎಂದು ಘೋಷಿಸುವಂತೆ ಅದೇ ಸಮುದಾಯದವರು ಮನವಿ ಮಾಡಿದರು. ಅದರಂತೆ ಸಮಿತಿ ರಚಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಯಿತು‘ ಎಂದು ಹೇಳಿದರು.</p>.<p><strong>ನಳಂದ ಜ್ಞಾನ, ಅಧ್ಯಯನ ಕೇಂದ್ರ ಮತ್ತು ಬೌದ್ಧ ವಿ.ವಿ</strong><br />ಚಾಮರಾಜನಗರದ ಇಂಟರ್ನ್ಯಾಷನಲ್ ಬುದ್ಧಿಸ್ಟ್ ಮಾಂಕ್ಸ್ ಚಾರಿಟಬಲ್ ಟ್ರಸ್ಟ್ ವತಿಯಿಂದ ನಿರ್ಮಾಣ ಆಗಲಿರುವ ನಳಂದ ಬೌದ್ಧ ವಿಶ್ವವಿದ್ಯಾಲಯ, ನಳಂದ ಜ್ಞಾನ ಮತ್ತು ಅಧ್ಯಯನ ಕೇಂದ್ರಕ್ಕೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 25 ಎಕರೆ ಭೂಮಿ ಮಂಜೂರು ಮಾಡುವುದರ ಜೊತೆಗೆ ₹ 10 ಕೋಟಿ ಧನಸಹಾಯವನ್ನೂ ಬಿಡುಗಡೆ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ‘ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದಲ್ಲಿ ಅವರೇ ನನಗೆ ಗಂಟು ಬಿದ್ದಿದ್ದರು. ಇದರಲ್ಲಿ ನನ್ನ ತಪ್ಪು ಏನೂ ಇರಲಿಲ್ಲ. ಹಾಗಿದ್ದರೂ ನನ್ನ ವಿರುದ್ಧ ಅಪಪ್ರಚಾರ ಮಾಡಲಾಯಿತು’ ಎಂದು ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದರು.</p>.<p>ಚಾಮರಾಜನಗರ ಸಮೀಪದ ಯಡಬೆಟ್ಟದಲ್ಲಿ ನಳಂದ ಜ್ಞಾನ ಮತ್ತು ಅಧ್ಯಯನ ಕೇಂದ್ರ ಹಾಗೂ ನಳಂದ ಬೌದ್ಧ ವಿಶ್ವವಿದ್ಯಾಲಯಕ್ಕೆ ಶನಿವಾರ ಭೂಮಿಪೂಜೆ, ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದರು. ‘ಧರ್ಮದ ವಿಚಾರದ ಬಗ್ಗೆ ಮಾತನಾಡುವಾಗ ನಾನು ಎಚ್ಚರಿಕೆಯಿಂದ ಇರುತ್ತೇನೆ. ಏನಾದರೂ ಹೇಳಿದರೆ ಅದು ವಿವಾದ ಆಗುತ್ತದೆ’ ಎಂದರು.</p>.<p>‘ವೀರಶೈವ– ಲಿಂಗಾಯತರಲ್ಲಿ ಗುರುಪರಂಪರೆ ಮತ್ತು ವಿರಕ್ತ ಪರಂಪರೆ ಎಂಬ ಎರಡು ವಿಧ ಇದೆ. ಒಂದು ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿದಾಗ ಲಿಂಗಾಯತ ಪ್ರತ್ಯೇಕ ಧರ್ಮ ಎಂದು ಘೋಷಿಸುವಂತೆ ಅದೇ ಸಮುದಾಯದವರು ಮನವಿ ಮಾಡಿದರು. ಅದರಂತೆ ಸಮಿತಿ ರಚಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಯಿತು‘ ಎಂದು ಹೇಳಿದರು.</p>.<p><strong>ನಳಂದ ಜ್ಞಾನ, ಅಧ್ಯಯನ ಕೇಂದ್ರ ಮತ್ತು ಬೌದ್ಧ ವಿ.ವಿ</strong><br />ಚಾಮರಾಜನಗರದ ಇಂಟರ್ನ್ಯಾಷನಲ್ ಬುದ್ಧಿಸ್ಟ್ ಮಾಂಕ್ಸ್ ಚಾರಿಟಬಲ್ ಟ್ರಸ್ಟ್ ವತಿಯಿಂದ ನಿರ್ಮಾಣ ಆಗಲಿರುವ ನಳಂದ ಬೌದ್ಧ ವಿಶ್ವವಿದ್ಯಾಲಯ, ನಳಂದ ಜ್ಞಾನ ಮತ್ತು ಅಧ್ಯಯನ ಕೇಂದ್ರಕ್ಕೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 25 ಎಕರೆ ಭೂಮಿ ಮಂಜೂರು ಮಾಡುವುದರ ಜೊತೆಗೆ ₹ 10 ಕೋಟಿ ಧನಸಹಾಯವನ್ನೂ ಬಿಡುಗಡೆ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>