ಈ ಸಂದರ್ಭದಲ್ಲಿ ಮಾತನಾಡಿದರೇಷ್ಮೆಗೂಡು ಮಾರುಕಟ್ಟೆಯ ಉಪನಿರ್ದೇಶಕ ರಾಚಪ್ಪ, ‘ಸೋಂಕು ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದೊಂದೇ ಅಸ್ತ್ರ. ಇದನ್ನು ಗಮನದಲ್ಲಿ ಇಟ್ಟುಕೊಂಡು ವ್ಯಾಪಾರ ಮಾಡಬೇಕು. ಮಾರುಕಟ್ಟೆಗೆ ಬರುವವರು ಕಡ್ಡಾಯವಾಗಿ ಮುಖಗವುಸು ಧರಿಸಬೇಕು ಮತ್ತು ಒಳಗಡೆ ಪ್ರವೇಶ ಮಾಡುವ ಮೊದಲು ಕೈಗಳನ್ನು ಸ್ವಚ್ಛವಾಗಿ ತೊಳೆದುಕೊಂಡು ಬರಬೇಕು. ರೈತರು, ರೀಲರ್ಗಳು, ಸಿಬ್ಬಂದಿ ಬಿಟ್ಟು ಬೇರೆ ಯಾರೂ ಮಾರುಕಟ್ಟೆಗೆ ಪ್ರವೇಶಿಸಬಾರದು. ಅನವಶ್ಯಕವಾಗಿ ಒಳಗಡೆ ಬಂದರೆ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಸಿದರು.