ರೇಚಪ್ಪ ಅವರ ಕುಟುಂಬ ಜಮೀನಿನ ಮನೆಯಲ್ಲಿ ವಾಸವಿದೆ. ಪೂಜಿತಾ ಹಾಗೂ ಪುಣ್ಯ ಇಬ್ಬರೂ ಬೆಳಿಗ್ಗೆ ಮನೆಯಲ್ಲಿ ತಿಂಡಿ ತಿಂದು, ಜಮೀನಿಗೆ ಹೋಗಿದ್ದಾರೆ. ಸೀಬೆ ಮರದಲ್ಲಿದ್ದ ಹಣ್ಣು ಕೀಳಲು ಮರದ ಮೇಲೆ ಹತ್ತಿದ್ದಾರೆ. ಈ ವೇಳೆ ಆಯತಪ್ಪಿ ಕೆಳಗೆ ಇದ್ದ ಕೃಷಿ ಹೊಂಡದಲ್ಲಿ ಬಿದ್ದರು. ನೀರಿನಿಂದ ಮೇಲಕ್ಕೆಬರಲಾಗದೆ ಮೃತಪಟ್ಟರು ಎಂದು ಗೊತ್ತಾಗಿದೆ.