ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಡ್ಲುಪೇಟೆ: ಸೀಬೆಹಣ್ಣು ಕೀಳುವಾಗ ಕೃಷಿ ಹೊಂಡಕ್ಕೆ ಬಿದ್ದು ಸಹೋದರಿಯರ ದುರ್ಮರಣ

Last Updated 3 ಮೇ 2022, 12:04 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ಸೀಬೆಹಣ್ಣು ಕೀಳಲು ಹೋಗಿದ್ದ ಅಕ್ಕ ತಂಗಿಯರು ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕೆಬ್ಬೇಪುರ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಗ್ರಾಮದ ರೇಚಪ್ಪ ಮತ್ತು ವೇದಾ ದಂಪತಿಯ ಪುತ್ರಿಯರಾದ ಪೂಜಿತಾ (14) ಹಾಗೂ ಪುಣ್ಯ(12) ಮೃತಪಟ್ಟ ಸಹೋದರಿಯರು. ಪೂಜಿತಾ 8ನೇ ತರಗತಿಯಲ್ಲಿ ಓದುತ್ತಿದ್ದರೆ, ಪುಣ್ಯ 6ನೇ ತರಗತಿ ವಿದ್ಯಾರ್ಥಿನಿ.

ರೇಚಪ್ಪ ಅವರ ಕುಟುಂಬ ಜಮೀನಿನ ಮನೆಯಲ್ಲಿ ವಾಸವಿದೆ. ಪೂಜಿತಾ ಹಾಗೂ ಪುಣ್ಯ ಇಬ್ಬರೂ ಬೆಳಿಗ್ಗೆ ಮನೆಯಲ್ಲಿ ತಿಂಡಿ ತಿಂದು, ಜಮೀನಿಗೆ ಹೋಗಿದ್ದಾರೆ. ಸೀಬೆ ಮರದಲ್ಲಿದ್ದ ಹಣ್ಣು ಕೀಳಲು ಮರದ ಮೇಲೆ ಹತ್ತಿದ್ದಾರೆ. ಈ ವೇಳೆ ಆಯತಪ್ಪಿ ಕೆಳಗೆ ಇದ್ದ ಕೃಷಿ ಹೊಂಡದಲ್ಲಿ ಬಿದ್ದರು. ನೀರಿನಿಂದ ಮೇಲಕ್ಕೆ‌ಬರಲಾಗದೆ ಮೃತಪಟ್ಟರು ಎಂದು ಗೊತ್ತಾಗಿದೆ.

ಇಬ್ಬರು ಬಾಲಕಿಯರ ಮೃತ ದೇಹಗಳನ್ನು ಕೃಷಿ ಹೊಂಡದಿಂದ ಮೇಲಕ್ಕೆ ಎತ್ತಲಾಗಿದ್ದು,ಈ ವೇಳೆ ಪೋಷಕರು ಹಾಗು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಗುಂಡ್ಲುಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT