<p><strong>ಚಾಮರಾಜನಗರ</strong>: ಗಣರಾಜ್ಯೋತ್ಸವದ ಅಂಗವಾಗಿ ನಗರದಲ್ಲಿ ರೆಹ್ಬರ್ ಅಸೋಸಿಯೇಷನ್ ವಿದ್ಯಾರ್ಥಿಗಳು ಸ್ಕೇಟಿಂಗ್ ಮ್ಯಾರಥಾನ್ ನಡೆಸಿದರು.</p>.<p>ನಗರದ ಸುಲ್ತಾನ್ ಷರೀಪ್ ವೃತ್ತದಲ್ಲಿ ಜಿಲ್ಲಾ ನೆಟ್ಬಾಲ್ ಅಸೋಸಿಯೇಷನ್ ಗೌರವಾಧ್ಯಕ್ಷೆ ನರ್ಗಿಸ್ ಬಾನು ಮ್ಯಾರಥಾನ್ಗೆ ಚಾಲನೆ ನೀಡಿ ಮಾತನಾಡಿ, ಮಕ್ಕಳು ಮೊಬೈಲ್, ಸಾಮಾಜಿಕ ಜಾಲತಾಣಗಳ ಪ್ರಭಾವಕ್ಕೆ ಒಳಗಾಗಿರುವ ಕಾಲಘಟ್ಟದಲ್ಲಿ ಮಕ್ಕಳು ಸ್ಕೇಟಿಂಗ್ನಂತಹ ಕ್ರೀಡೆಗಳಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.</p>.<p>ಚುಡಾ ಅಧ್ಯಕ್ಷ ಮಹಮದ್ ಅಸ್ಗರ್ ಮುನ್ನ ಮಾತನಾಡಿ, ಗ್ರಾಮೀಣ ಕ್ರೀಡಾಕೂಟಗಳು ಚಾಮರಾಜನಗರದಲ್ಲಿ ಆಯೋಜನೆಗೊಳ್ಳುತ್ತಿರುವುದು ಸಂತಸದ ಸಂಗತಿ, ಸ್ಕೇಟಿಂಗ್, ಕರಾಟೆ ಕ್ರೀಡೆಗಳಿಗೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದರು.</p>.<p>ಜಿಲ್ಲಾ ನೆಟ್ ಬಾಲ್ ಅಸೋಸಿಯೇಷನ್ ಅಧ್ಯಕ್ಷ ವಿ.ಶ್ರೀನಿವಾಸಪ್ರಸಾದ್ ಮಾತನಾಡಿ, ನಗರದಲ್ಲಿ ಈಚೆಗೆ ಹೆಚ್ಚು ಕ್ರೀಡಾಕೂಟಗಳ ಆಯೋಜನೆ ನಡೆಯುತ್ತಿದ್ದು ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ಕೇಟಿಂಗ್, ಕರಾಟೆ ಕ್ರೀಡಾಂಗಣ ನಿರ್ಮಿಸಲು ಜಿಲ್ಲಾಡಳಿತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು</p>.<p>ಚಾಮರಾಜನಗರದ ಸುಲ್ತಾನ್ ಷರೀಪ್ ವೃತ್ತದಿಂದ ಆರಂಭವಾದ ಮ್ಯಾರಥಾನ್, ದೊಡ್ಡಂಗಡಿಬೀದಿ, ಅಗ್ರಹಾರಬೀದಿ, ಡಿವಿಯೇಷನ್ ರಸ್ತೆ ಮೂಲಕ ಮರಳಿ ಸುಲ್ತಾನ್ ಷರೀಪ್ ವೃತ್ತದಲ್ಲಿ ಮುಕ್ತಾಯಗೊಂಡಿತು.</p>.<p>ಇದೇ ಸಂದರ್ಭದಲ್ಲಿ ರೆಹ್ಬರ್ ಅಸೋಸಿಯೇಷನ್ ಅಧ್ಯಕ್ಷ ಪುರ್ಕಾನ್ ಪಾಷಾ ಅಜೀಂ ಸೇರಿದಂತೆ ಅಸೋಸಿಯೇಷನ್ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ಗಣರಾಜ್ಯೋತ್ಸವದ ಅಂಗವಾಗಿ ನಗರದಲ್ಲಿ ರೆಹ್ಬರ್ ಅಸೋಸಿಯೇಷನ್ ವಿದ್ಯಾರ್ಥಿಗಳು ಸ್ಕೇಟಿಂಗ್ ಮ್ಯಾರಥಾನ್ ನಡೆಸಿದರು.</p>.<p>ನಗರದ ಸುಲ್ತಾನ್ ಷರೀಪ್ ವೃತ್ತದಲ್ಲಿ ಜಿಲ್ಲಾ ನೆಟ್ಬಾಲ್ ಅಸೋಸಿಯೇಷನ್ ಗೌರವಾಧ್ಯಕ್ಷೆ ನರ್ಗಿಸ್ ಬಾನು ಮ್ಯಾರಥಾನ್ಗೆ ಚಾಲನೆ ನೀಡಿ ಮಾತನಾಡಿ, ಮಕ್ಕಳು ಮೊಬೈಲ್, ಸಾಮಾಜಿಕ ಜಾಲತಾಣಗಳ ಪ್ರಭಾವಕ್ಕೆ ಒಳಗಾಗಿರುವ ಕಾಲಘಟ್ಟದಲ್ಲಿ ಮಕ್ಕಳು ಸ್ಕೇಟಿಂಗ್ನಂತಹ ಕ್ರೀಡೆಗಳಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.</p>.<p>ಚುಡಾ ಅಧ್ಯಕ್ಷ ಮಹಮದ್ ಅಸ್ಗರ್ ಮುನ್ನ ಮಾತನಾಡಿ, ಗ್ರಾಮೀಣ ಕ್ರೀಡಾಕೂಟಗಳು ಚಾಮರಾಜನಗರದಲ್ಲಿ ಆಯೋಜನೆಗೊಳ್ಳುತ್ತಿರುವುದು ಸಂತಸದ ಸಂಗತಿ, ಸ್ಕೇಟಿಂಗ್, ಕರಾಟೆ ಕ್ರೀಡೆಗಳಿಗೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದರು.</p>.<p>ಜಿಲ್ಲಾ ನೆಟ್ ಬಾಲ್ ಅಸೋಸಿಯೇಷನ್ ಅಧ್ಯಕ್ಷ ವಿ.ಶ್ರೀನಿವಾಸಪ್ರಸಾದ್ ಮಾತನಾಡಿ, ನಗರದಲ್ಲಿ ಈಚೆಗೆ ಹೆಚ್ಚು ಕ್ರೀಡಾಕೂಟಗಳ ಆಯೋಜನೆ ನಡೆಯುತ್ತಿದ್ದು ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ಕೇಟಿಂಗ್, ಕರಾಟೆ ಕ್ರೀಡಾಂಗಣ ನಿರ್ಮಿಸಲು ಜಿಲ್ಲಾಡಳಿತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು</p>.<p>ಚಾಮರಾಜನಗರದ ಸುಲ್ತಾನ್ ಷರೀಪ್ ವೃತ್ತದಿಂದ ಆರಂಭವಾದ ಮ್ಯಾರಥಾನ್, ದೊಡ್ಡಂಗಡಿಬೀದಿ, ಅಗ್ರಹಾರಬೀದಿ, ಡಿವಿಯೇಷನ್ ರಸ್ತೆ ಮೂಲಕ ಮರಳಿ ಸುಲ್ತಾನ್ ಷರೀಪ್ ವೃತ್ತದಲ್ಲಿ ಮುಕ್ತಾಯಗೊಂಡಿತು.</p>.<p>ಇದೇ ಸಂದರ್ಭದಲ್ಲಿ ರೆಹ್ಬರ್ ಅಸೋಸಿಯೇಷನ್ ಅಧ್ಯಕ್ಷ ಪುರ್ಕಾನ್ ಪಾಷಾ ಅಜೀಂ ಸೇರಿದಂತೆ ಅಸೋಸಿಯೇಷನ್ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>