20 ಸಾವಿರ ಜನರಿಗೆ ನೀಡುವ ಗುರಿ: ಸೋಮವಾರ ಜಿಲ್ಲೆಯಲ್ಲಿ 20 ಸಾವಿರ ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಚಾಮರಾಜನಗರ ತಾಲ್ಲೂಕಿನಲ್ಲಿ 6,000 , ಗುಂಡ್ಲುಪೇಟೆ ತಾಲೂಕಿನಲ್ಲಿ 5,000, ಕೊಳ್ಳೇಗಾಲ ತಾಲ್ಲೂಕಿನಲ್ಲಿ 4,000, ಹನೂರು ತಾಲ್ಲೂಕಿನಲ್ಲಿ 3,000 ಮತ್ತು ಯಳಂದೂರು ತಾಲ್ಲೂಕಿ 2,000 ಜನರಿಗೆ ಕೋವಿಡ್ ಲಸಿಕೆ ನೀಡಲು ಎಲ್ಲ ಅಗತ್ಯ ಸಿದ್ಧತೆ ಮಾಡಲಾಗಿದೆ.