ಕರ್ನಾಟಕ ರಾಜ್ಯವಲ್ಲದೆ ತಮಿಳುನಾಡಿನಿಂದಲೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಅಮಾವಾಸ್ಯೆಯ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ದೇವಾಲಯ ಸುತ್ತ ಪ್ರದಕ್ಷಣೆ ಸೇರಿದಂತೆ ಪಂಜಿನ ಸೇವೆ, ಮುಡಿ ಸೇವೆ, ಉರುಳು ಸೇವೆ, ರುದ್ರಾಕ್ಷಿ ಮಂಟಪ, ಬಸವ ವಾಹನ, ಹುಲಿವಾಹನ ಉತ್ಸವ ಸೇವೆಗಳನ್ನು ನೆರವೇರಿಸಿ ಮಾದಪ್ಪನ ಕೃಪೆಗೆ ಪಾತ್ರರಾದರು. ಸುಗಮ ದೇವರ ದರ್ಶನಕ್ಕಾಗಿ ಉಚಿತ ಸರದಿ ಅಲ್ಲದೆ, ವಿಶೇಷ ₹200, ₹300, ₹500 ಶುಲ್ಕದ ಸರತಿ ಸಾಲುಗಳನ್ನು ತೆರೆಯಲಾಗಿತ್ತು. ನಿರಂತರ ಅನ್ನ ದಾಸೋಹ, ಕುಡಿಯುವ ನೀರು ಹಾಗೂ ಶೌಚಾಲಯದ ವ್ಯವಸ್ಥೆಯನ್ನು ಪ್ರಾಧಿಕಾರದ ವತಿಯಿಂದ ಮಾಡಲಾಗಿತ್ತು.