‘ಕಾನೂನಿಗಿಂತ ಯಾರೂ ಮೇಲಲ್ಲ. ಆದಾಯ ತೆರಿಗೆ ಇಲಾಖೆ ಹಾಗೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಿವಕುಮಾರ್ ಅವರ ಆಸ್ತಿ, ಆದಾಯ, ವ್ಯವಹಾರದ ಬಗ್ಗೆ ತನಿಖೆ ನಡೆಸಿ, ಅವರನ್ನು ವಿಚಾರಣೆ ನಡೆಸಿದ್ದಾರೆ. ನಂತರವಷ್ಟೇ ಅವರ ಬಂಧನವಾಗಿದೆ. ಪ್ರಕರಣ ಈಗ ನ್ಯಾಯಾಲಯದ ಮೆಟ್ಟಿಲೇರಿದೆ. ಶಿವಕುಮಾರ್ ಅವರಿಗೆ ಕಾನೂನು ಹೋರಾಟ ಮಾಡುವುದಕ್ಕೆ ಅವಕಾಶ ಇದೆ. ಬಂದ್, ಗಲಾಟೆ ಮಾಡುವುದರಿಂದ ಏನೂ ಪ್ರಯೋಜನ ಇಲ್ಲ’ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.