ಕೋವಿಡ್ ನಿಯಂತ್ರಣಕ್ಕಾಗಿ ಶಾಲೆಗಳನ್ನೆಲ್ಲ ಬಂದ್ ಮಾಡಲಾಗಿದೆ, ಶಿಕ್ಷಕರಿಗೆ ರಜೆ ನೀಡಲಾಗಿದೆಯೇ ಅಥವಾ ಅವರು ಕರ್ತವ್ಯಕ್ಕೆ ಹಾಜರಾಗಬೇಕೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, 'ಮಾರ್ಗದರ್ಶಿ ಸೂತ್ರದಲ್ಲಿ ಎಲ್ಲವನ್ನೂ ಸ್ಪಷ್ಟವಾಗಿ ಹೇಳಲಾಗಿದೆ. ಶಿಕ್ಷಕರ ವಿಚಾರದಲ್ಲಿ ಆಯಾ ಜಿಲ್ಲೆಗಳ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ನಿರ್ಧಾರ ಕೈಗೊಳ್ಳಲಿದ್ದಾರೆ' ಎಂದಷ್ಟೇ ಹೇಳಿದರು.