<p><strong>ಚಾಮರಾಜನಗರ:</strong> ಕೋವಿಡ್ –19 ನಿಯಂತ್ರಣಕ್ಕೆ ಹೇರಲಾಗಿದ್ದ ಲಾಕ್ಡೌನ್ನಿಂದಾಗಿ ಮುಂದೂಡಲಾಗಿದ್ದ 2019–20ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಕೊನೆಯ ಪರೀಕ್ಷೆ (ತೃತೀಯ ಭಾಷೆ) ಶುಕ್ರವಾರ ನಡೆಯಲಿದೆ.</p>.<p>ಜಿಲ್ಲೆಯಾದ್ಯಂತ 54 ಕೇಂದ್ರಗಳಲ್ಲಿ ಗುರುವಾರ ನಡೆದ ಪ್ರಥಮ ಭಾಷಾ (ಕನ್ನಡ) ವಿಷಯದ ಪರೀಕ್ಷೆಗೆ ಶೆ 98.97ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದಾರೆ.</p>.<p>10,943 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, 10,831 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. 112 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಹಾಜರಾದವರಲ್ಲಿ 5,439 ಬಾಲಕರು ಹಾಗೂ 5,392 ಬಾಲಕಿಯರು. 41 ಹುಡುಗರು ಹಾಗೂ 71 ಹುಡುಗಿಯರು ಪರೀಕ್ಷೆ ಬರೆದಿಲ್ಲ.</p>.<p>ಕಂಟೈನ್ಮೆಂಟ್ ವಲಯದ 16 ವಿದ್ಯಾರ್ಥಿಗಳು ಗುರುವಾರ ಪರೀಕ್ಷೆ ಬರೆದಿದ್ದಾರೆ. ಅನಾರೋಗ್ಯ ಹೊಂದಿದ್ದ 24 ಮಕ್ಕಳು ಪರೀಕ್ಷೆ ಬರೆದಿದ್ದಾರೆ. ಇವರಿಗೆಲ್ಲರಿಗೂ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿತ್ತು.</p>.<p><strong>ಡಿಡಿಪಿಐ ಭೇಟಿ</strong>: ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಡಿಡಿಪಿಐ) ಎಸ್.ಟಿ.ಜವರೇಗೌಡ ಅವರು ಗುರುವಾರಕೊಳ್ಳೇಗಾಲ ತಾಲ್ಲೂಕಿನ ಏಳು ಪರೀಕ್ಷಾ ಕೇಂದ್ರಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಕೋವಿಡ್ –19 ನಿಯಂತ್ರಣಕ್ಕೆ ಹೇರಲಾಗಿದ್ದ ಲಾಕ್ಡೌನ್ನಿಂದಾಗಿ ಮುಂದೂಡಲಾಗಿದ್ದ 2019–20ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಕೊನೆಯ ಪರೀಕ್ಷೆ (ತೃತೀಯ ಭಾಷೆ) ಶುಕ್ರವಾರ ನಡೆಯಲಿದೆ.</p>.<p>ಜಿಲ್ಲೆಯಾದ್ಯಂತ 54 ಕೇಂದ್ರಗಳಲ್ಲಿ ಗುರುವಾರ ನಡೆದ ಪ್ರಥಮ ಭಾಷಾ (ಕನ್ನಡ) ವಿಷಯದ ಪರೀಕ್ಷೆಗೆ ಶೆ 98.97ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದಾರೆ.</p>.<p>10,943 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, 10,831 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. 112 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಹಾಜರಾದವರಲ್ಲಿ 5,439 ಬಾಲಕರು ಹಾಗೂ 5,392 ಬಾಲಕಿಯರು. 41 ಹುಡುಗರು ಹಾಗೂ 71 ಹುಡುಗಿಯರು ಪರೀಕ್ಷೆ ಬರೆದಿಲ್ಲ.</p>.<p>ಕಂಟೈನ್ಮೆಂಟ್ ವಲಯದ 16 ವಿದ್ಯಾರ್ಥಿಗಳು ಗುರುವಾರ ಪರೀಕ್ಷೆ ಬರೆದಿದ್ದಾರೆ. ಅನಾರೋಗ್ಯ ಹೊಂದಿದ್ದ 24 ಮಕ್ಕಳು ಪರೀಕ್ಷೆ ಬರೆದಿದ್ದಾರೆ. ಇವರಿಗೆಲ್ಲರಿಗೂ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿತ್ತು.</p>.<p><strong>ಡಿಡಿಪಿಐ ಭೇಟಿ</strong>: ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಡಿಡಿಪಿಐ) ಎಸ್.ಟಿ.ಜವರೇಗೌಡ ಅವರು ಗುರುವಾರಕೊಳ್ಳೇಗಾಲ ತಾಲ್ಲೂಕಿನ ಏಳು ಪರೀಕ್ಷಾ ಕೇಂದ್ರಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>