ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

SSLC Results | ಚಾಮರಾಜನಗರ: 7ರಿಂದ 24ನೇ ಸ್ಥಾನಕ್ಕೆ ಕುಸಿದ ಜಿಲ್ಲೆ

Published : 10 ಮೇ 2024, 5:25 IST
Last Updated : 10 ಮೇ 2024, 5:25 IST
ಫಾಲೋ ಮಾಡಿ
Comments
ಉತ್ತಮ ಫಲಿತಾಂಶಕ್ಕೆ ಎಲ್ಲ ಪ್ರಯತ್ನಗಳನ್ನೂ ನಡೆಸಲಾಗಿತ್ತು. ಹಾಗಿದ್ದರೂ ಕಡಿಮೆ ಫಲಿತಾಂಶ ದಾಖಲಾಗಿದೆ‌‌
ಮಲ್ಲಿಕಾರ್ಜುನ ಶಿಕ್ಷಣಾಧಿಕಾರಿ
ಟ್ಯೂಷನ್‌ಗೆ ಹೋಗಿಲ್ಲ
ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿರುವುದು ಖುಷಿ ತಂದಿದೆ. ಯಾವುದೇ ಟ್ಯೂಷನ್ ಹೋಗಿಲ್ಲ ಶಾಲೆಯಲ್ಲಿ ಕಲಿತದ್ದನ್ನು ಮನೆಯಲ್ಲಿ ಪುನರಾವರ್ತನೆ ಮಾಡುತ್ತಿದ್ದೆ. ಪೋಷಕರು ಹಾಗೂ ಶಿಕ್ಷಕರು ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದರು. ನಮ್ಮದು ರೈತ ಕುಟುಂಬ. ವೈದ್ಯೆಯಾಗಬೇಕೆಂಬ ಆಸೆ ಇದೆ. –ರತ್ನಮ್ಮ ಸರ್ಕಾರಿ ಆದರ್ಶ ವಿದ್ಯಾಲಯ ಗುಂಡ್ಲುಪೇಟೆ (ಜಿಲ್ಲೆಗೆ ಮೊದಲ ಸ್ಥಾನ)  ವೈದ್ಯನಾಗುವ ಆಸೆ ಉತ್ತಮ ಅಂಕ ಗಳಿಸಿರುವುದಕ್ಕೆ ತುಂಬಾ ಖುಷಿಯಾಗುತ್ತಿದೆ. ಮುಖ್ಯವಾಗಿ ಶಿಕ್ಷಕರ ಸಹಕಾರ ಹಾಗೂ ತಂದೆ ತಾಯಿಯ ಸಹಕಾರದಿಂದ ಇದು ಸಾಧ್ಯವಾಗಿದೆ. ಮುಂದಿನ ದಿನಗಳಲ್ಲಿ ವೈದ್ಯನಾಗಬೇಕು ಎಂಬ ಕನಸನ್ನು ಕಂಡಿದ್ದೇನೆ –ಶ್ರೀಪ್ರಜನ್ ಆದರ್ಶ ವಿದ್ಯಾಲಯ ಕೊಳ್ಳೇಗಾಲ (ಜಿಲ್ಲೆಗೆ 2ನೇ ಸ್ಥಾನ)
ಫಲಿತಾಂಶ ಕುಸಿತಕ್ಕೆ ಕಾರಣವೇನು?
ಕಳೆದ ವರ್ಷ ರಾಜ್ಯದಲ್ಲಿ ಏಳನೇ ಸ್ಥಾನ ಗಳಿಸಿದ್ದ ಜಿಲ್ಲೆಯ ಈ ಬಾರಿ ಕಳಪೆ ಫಲಿತಾಂಶ ದಾಖಲಿಸಿದೆ. ಇದಕ್ಕೆ ಏನು ಕಾರಣ ಎಂಬ ಚರ್ಚೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಿಕ್ಷಕರ ವಲಯದಲ್ಲಿ ನಡೆಯುತ್ತಿದೆ. ಈ ಬಾರಿ ಪರೀಕ್ಷಾ ಪ್ರಕ್ರಿಯೆ ಕಟ್ಟುನಿಟ್ಟಾಗಿ ನಡೆದುದರಿಂದ ಅದರಲ್ಲೂ ವಿಶೇಷವಾಗಿ ಪರೀಕ್ಷಾ ಕೊಠಡಿಯಲ್ಲೂ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದರಿಂದ ಉತ್ತಮ ಫಲಿತಾಂಶ ಬರಲಿಲ್ಲ ಎಂಬುದು ಕೆಲವು ಅಧಿಕಾರಿಗಳು ಹಾಗೂ ಬಹುತೇಕ ಶಿಕ್ಷಕರ ಅಭಿಪ್ರಾಯ. ಚಾಮರಾಜನಗರ ಜಿಲ್ಲೆ ಮಾತ್ರವಲ್ಲ. ಹಿಂದಿನ ವರ್ಷಗಳಲ್ಲಿ ರಾಜ್ಯ ಮಟ್ಟದಲ್ಲಿ ಉತ್ತಮ ಸ್ಥಾನಮಾನ ಗಳಿಸಿದ್ದ ಜಿಲ್ಲೆಗಳು ಕೂಡ ಈ ಬಾರಿ ಕಡಿಮೆ ಫಲಿತಾಂಶ ದಾಖಲಿಸಿವೆ. ‘ಜಿಲ್ಲೆಗೆ ಹೆಚ್ಚಿನ ಫಲಿತಾಂಶ ಸಿಗಬೇಕು ಎಂಬ ಕಾರಣಕ್ಕೆ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾಗುವ ಶಿಕ್ಷಕರು ಅಧಿಕಾರಿಗಳೇ ಮಕ್ಕಳಿಗೆ ಉತ್ತರ ಹೇಳಿಕೊಡುತ್ತಿದ್ದರು. ನಕಲು ಮಾಡುವುದಕ್ಕೆ ಅವಕಾಶ ನೀಡುತ್ತಿದ್ದರು. ಈ ಬಾರಿ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದರಿಂದ ಇದು ಸಾಧ್ಯವಾಗಿಲ್ಲ’ ಎಂದು ಶಿಕ್ಷಕರು ಹಾಗೂ ಅಧಿಕಾರಿಗಳು ಖಾಸಗಿಯಾಗಿ ಹೇಳುತ್ತಿದ್ದಾರೆ. ‘ಇದು ಜಿಲ್ಲೆಯ ನಿಜವಾದ ಫಲಿತಾಂಶ. ಇನ್ನೂ ಕಡಿಮೆ ಬರಬಹುದು ಎಂಬ ಆತಂಕ ಹೊಂದಿದ್ದೆವು. ಆದರೆ ಮಕ್ಕಳು ಚೆನ್ನಾಗಿಯೇ ಬರೆದಿದ್ದಾರೆ. ಇನ್ನು ಕೆಲವು ವರ್ಷಗಳ ಕಾಲ ಇದೇ ಮಾದರಿ ಅನುಸರಿಸಿದರೆ ಜಿಲ್ಲೆ ಉತ್ತಮ ಫಲಿತಾಂಶ ದಾಖಲಿಸಲಿದೆ’ ಎಂದು ಶಿಕ್ಷಕರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.
ಇಬ್ಬರು ‘ಕಾಡಿನ ಮಕ್ಕಳು’ ತೇರ್ಗಡೆ
ಜಿಲ್ಲಾಡಳಿತ ವಿಶೇಷ ಆಸಕ್ತಿ ವಹಿಸಿ ಮೂರು ತಿಂಗಳ ಕಾಲ ವಿಶೇಷ ತರಬೇತಿ ನೀಡಿದ್ದ ಎಸ್‌ಎಸ್‌ಎಲ್‌ಸಿ ಶಿಕ್ಷಣವನ್ನು ಅರ್ಧದಲ್ಲೇ ಮೊಟಕುಗೊಳಿಸಿದ್ದ 30 ಗಿರಿಜನ ಮಕ್ಕಳಲ್ಲಿ ಇಬ್ಬರು ಮಾತ್ರ ತೇರ್ಗಡೆಯಾಗಲು ಯಶಸ್ವಿಯಾಗಿದ್ದಾರೆ. ಪ್ರಶಾಂತ್‌ ಮತ್ತು ರಾಜೇಶ್‌ ಎಂಬುವವರು ಉತ್ತೀರ್ಣರಾಗಿದ್ದಾರೆ. ಕ್ರಮವಾಗಿ 284 ಮತ್ತು 253 ಅಂಕಗಳನ್ನು ಗಳಿಸಿದ್ದಾರೆ. ಗಿರಿಜನ ಮಕ್ಕಳು ಅರ್ಧದಲ್ಲೇ ಶಿಕ್ಷಣ ಮೊಟಕುಗೊಳಿಸಬಾರದು ಎಂಬ ಉದ್ದೇಶದಿಂದ ಜಿಲ್ಲಾಧಿಕಾರಿ ಶಿಲ್ಪಾ ನಾಗ್‌ ಅವರು ವಿಶೇಷ ಆಸಕ್ತಿ ವಹಿಸಿ 30 ಮಕ್ಕಳನ್ನು ಮೂರು ತಿಂಗಳ ಕಾಲ ಹಾಸ್ಟೆಲ್‌ನಲ್ಲಿ ಇರಿಸಿ ವಿಶೇಷ ತರಬೇತಿ ನೀಡಲು ವ್ಯವಸ್ಥೆ ಮಾಡಿದ್ದರು. ಮಕ್ಕಳು ಉತ್ತಮ ಸಾಧನೆ ಮಾಡುವ ನಿರೀಕ್ಷೆಯಲ್ಲಿ ಅಧಿಕಾರಿಗಳು ಇದ್ದರು. ಆದರೆ ಅವರ ಪ್ರಯತ್ನಕ್ಕೆ ದೊಡ್ಡ ಮಟ್ಟಿನ ಯಶಸ್ಸು ಸಿಕ್ಕಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT