ಕೊಳ್ಳೇಗಾಲ: ಹನೂರು ತಾಲ್ಲೂಕಿನ ಹುಲುಸು ಗುಡ್ಡದ ಬೋರೆ ಬಳಿ ನಕ್ಷತ್ರ ಆಮೆ ಸಾಗಣೆ ಮಾಡುತ್ತಿದ್ದ ತಮಿಳುನಾಡು ಮೂಲದ ಇಬ್ಬರು ಆರೋಪಿಗಳನ್ನು ನಗರದ ಅರಣ್ಯ ಸಂಚಾರಿ ದಳದ ಪೋಲಿಸರು ಬಂಧಿಸಿದ್ದಾರೆ. ತಮಿಳುನಾಡು ಮೂಲದ ಸುಕುಮಾರನ್ ಹಾಗೂ ಭೈರರೆಡ್ಡಿ ಬಂಧಿತ ಆರೋಪಿಗಳು.
ಇವರು ಹನೂರಿನ ಹುಲುಸುಗುಡ್ಡ ಬೋರೆ ಬಳಿ ನಕ್ಷತ್ರ ಆಮೆಯನ್ನು ಚೀಲದೊಳಗೆ ಹಾಕಿಕೊಂಡು ಬೈಕ್ನಲ್ಲಿ ಸಾಗಣೆ ಮಾಡುತ್ತಿದ್ದರು. ಖಚಿತ ಮಾಹಿತಿ ಆಧರಿಸಿದ ಅರಣ್ಯ ಸಂಚಾರಿ ದಳದ ಪಿಎಸ್ಐ ವಿಜಯರಾಜ್ ಸಿಬ್ಬಂದಿಯೊಂದಿಗೆ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿ, ಆಮೆ ಹಾಗೂ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ಕೊಳ್ಳೇಗಾಲದ ಅರಣ್ಯ ಸಂಚಾರಿದಳದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.