ಈ ಬೆಳವಣಿಗೆಯನ್ನು ಶಿಕ್ಷಣ ಇಲಾಖೆಯ ಅಧಿಕಾರಿಗಳು ದೃಢಪಡಿಸಿಲ್ಲ. ಆದರೆ, ವಿಷಯ ಗೊತ್ತಾಗುತ್ತಿದ್ದಂತೆಯೇ, ವಿಧಾನಪರಿಷತ್ ಸದಸ್ಯ ಶ್ರೀಕಂಠೇಗೌಡ ಅವರು ಗೀತಾಂಬ ಅವರಿಗೆ ಕರೆ ಮಾಡಿ ಪ್ರಕರಣದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅಲ್ಲದೇ, ವಿದ್ಯಾರ್ಥಿನಿಗೆ ಮುಂದಿನ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲು ಕ್ರಮ ವಹಿಸುವಂತೆ ಕೇಳಿಕೊಂಡಿದ್ದಾರೆ.